ಭಾರತದೊಂದಿಗೆ ಯುದ್ದಕ್ಕಿಳಿದರೆ ಪಾಕ್ ಸರ್ವನಾಶವಾಗಲಿದೆ
Team Udayavani, Sep 23, 2019, 7:59 AM IST
ಕಾಕಿನಾಡ: ಭಾರತದೊಂದಿಗೆ ಯುದ್ದ ಮಾಡುವ ಸಾಹಸ ತೋರಿಸಿದರೆ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಹೇಳಿದರು.
ಆಂಧ್ರಪ್ರದೇಶದ ಕಾಕಿನಾಡದಲ್ಲಿ ‘ಜನ್ ಜಾಗರಣ್’ ಕಾರ್ಯಕ್ರಮದಲ್ಲಿ ಮಾತನಾಡಿದ ಕಿಶನ್ ರೆಡ್ಡಿ, ಒಂದು ವೇಳೆ ಯುದ್ದ ನಡೆದರೆ ಪಾಕಿಸ್ಥಾನ ಸರ್ವನಾಶವಾಗಲಿದೆ ಎಂದರು.
ನರೇಂದ್ರ ಮೋದಿ ನೇತೃತ್ವದ ಸರಕಾರ ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುತ್ತಿದೆ. ನಮ್ಮದು ದೇಶ ಪ್ರೇಮದ ಸರಕಾರ ಎಂದು ಕಿಶನ್ ರೆಡ್ಡಿ ಹೇಳಿದರು.
ಪಾಕ್ ಆಕ್ರಮಿತ ಕಾಶ್ಮೀರದ ವಿಷಯದಲ್ಲಿ ಮಾತನಾಡಿದ ಅವರು ಸಮಯ ಬಂದಾಗ ಸರಿಯಾದ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಜಮ್ಮು ಮತ್ತು ಕಾಶ್ಮಿರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಯಾವುದೇ ರೀತಿಯ ಗಲಭೆ ಅಥವಾ ದೊಂಬಿಗಳಾಗಿಲ್ಲ. ಇದು ಹೆಮ್ಮೆಯ ವಿಷಯ ಎಂದರು.