ವೀರ್ ಸಾವರ್ಕರ್ ಪ್ರಧಾನಿಯಾಗಿದ್ದರೆ ಪಾಕಿಸ್ಥಾನ ರಚನೆಯಾಗುತ್ತಿರಲಿಲ್ಲ: ಉದ್ದವ್ ಠಾಕ್ರೆ
Team Udayavani, Sep 18, 2019, 8:44 AM IST
ಮುಂಬೈ: ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ತಿಳಿಸಿದ್ದಾರೆ.
ಸಾವರ್ಕರ್ ಜೀವನ ಚರಿತ್ತೆ “ಎಕೋಸ್ ಫ್ರಮ್ ಎ ಫರ್ ಗಾಟನ್ ಫಾಸ್ಟ್” ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು ಎನ್ ಡಿ ಎ ಸರಕಾರ ಹಿಂದುತ್ವ ಪರವಾಗಿದ್ದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ವೀರ್ ಸಾವರ್ಕರ್ ಅವರಿಗೆ ನೀಡಬೇಕೆಂದು ಇದೇ ವೇಳೆ ಒತ್ತಾಯಿಸಿದರು.
ದೇಶದ ಅಭಿವೃದ್ದಿಗಾಗಿ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ನೀಡಿದ ಕೊಡುಗೆಯನ್ನು ಎಂದಿಗೂ ಅಲ್ಲಗೆಳೆಯುವುದಿಲ್ಲ, ಆದರೇ ರಾಜಕಾರಣ ಎಂಬುದು ಎರಡು ಕುಟುಂಬಗಳಿಗೆ ಸೀಮಿತವಾಗಬಾರದು. ದೇಶದ ಆಭಿವೃದ್ಧಿಗಾಗಿ ಪಣತೊಡುವವರು ರಾಜಕಾರಣಿಯಾಗಿ ಬರಲು ಅವಕಾಶ ಸಿಗಬೇಕೆಂದು ಎಂದು ಅಭಿಪ್ರಾಯಪಟ್ಟರು. 14 ವರುಷಗಳ ಕಾಲ ಜೈಲಿನಲ್ಲಿದ್ದ ವೀರ್ ಸಾವರ್ಕರ್ ರಂತೆ ಕೇವಲ 14 ನಿಮಿಷ ನೆಹರೂ ಜೈಲಿನಲ್ಲಿದ್ದರೆ ಅವರನ್ನು ‘ವೀರ್’ ಎಂದು ಕರೆಯುತ್ತಿದ್ದೆ ಎಂದು ಇದೇ ವೇಳೆ ತಿಳಿಸಿದರು.
ರಾಹುಲ್ ಗಾಂಧಿ ವೀರ್ ಸಾವರ್ಕರ್ ಕುರಿತ ಪುಸ್ತಕಗಳನ್ನು ಹೆಚ್ಚು ಹೆಚ್ಚಾಗಿ ಓದಬೇಕಾಗಿದೆ. ಹಾಗಾದರೂ ಠೀಕೆ ಮಾಡುವುದು ತಪ್ಪುತ್ತದೆ ಎಂದು ಹೇಳಿದ್ದಾರೆ. “ಜೈಲಿನಿಂದ ಸ್ವಾತಂತ್ರ್ಯ ಪಡೆಯುವ ಸಲುವಾಗಿ ವೀರ್ ಸಾವರ್ಕರ್ ಬ್ರಿಟಿಷರಿಗೆ ಕ್ಷಮೆಯಾಚಿಸಿದ್ದರು” ಎಂದು 2019 ರ ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಹೇಳಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!