ಭಾರತದ ವಾಯುಗಡಿ ದಾಟಿದ ಪಾಕ್ ಹೆಲಿಕ್ಯಾಪ್ಟರ್;ಸೇನೆಯಿಂದ ಗುಂಡಿನ ಮಳೆ
Team Udayavani, Sep 30, 2018, 2:41 PM IST
ಶ್ರೀನಗರ : ಪಾಕಿಸ್ಥಾನದ ಸೇನಾ ಹೆಲಿಕ್ಯಾಪ್ಟರ್ ಭಾನುವಾರ ಭಾರತದ ವಾಯುಗಡಿಯನ್ನು ದಾಟಿ ಬಂದಿದ್ದು, ಪೂಂಚ್ ಪ್ರದೇಶದ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಮಧ್ಯಾಹ್ನ 12.13 ರ ವೇಳೆಗೆ ವಾಯುಗಡಿ ಉಲ್ಲಂಘನೆ ಮಾಡಿದ ಹೆಲಿಕ್ಯಾಪ್ಟರ್ ಕೆಲ ನಿಮಿಷಗಳ ಕಾಲ ಹಾರಾಟ ನಡೆಸಿದೆ. ಕೂಡಲೆ ಯೋಧರು ಹೆಲಿಕ್ಯಾಪ್ಟರ್ನತ್ತ ಗುಂಡಿನ ಮಳೆ ಸುರಿಸಿದ್ದಾರೆ. ಆ ಬಳಿಕ ಹೆಲಿಕ್ಯಾಪ್ಟರ್ ವಾಪಾಸಾಗಿದೆ ಎಂದು ತಿಳಿದು ಬಂದಿದೆ.
ಪಾಕ್ ಜೊತೆಗಿನ ಮಾತುಕತೆಯನ್ನು ಭಾರತ ರದ್ದು ಪಡಿಸಿದ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೇನೆ ವ್ಯಾಪಕ ಕಟ್ಟೆಚ್ಚರ ವಹಿಸಿದೆ. ಪಾಕ್ ಉದ್ಧಟತನದ ಬಗ್ಗೆ ಭಾರತ ತೀವ್ರ ವಿರೋಧ ವ್ಯಕ್ತ ಪಡಿಸಿದೆ. ಈಗಾಗಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯಬೇಕಾಗಿದ್ದ ಮಾತುಕತೆಯನ್ನು ರದ್ದು ಪಡಿಸಿದೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಿಶ್ವಸಂಸ್ಥೆ ಯಲ್ಲಿ ಪಾಕ್ ವಿರುದ್ಧ ಧ್ವನಿ ಎತ್ತಿ ಉಗ್ರವಾದಿತ್ವ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್