ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಯ ಸದಾನಂದ ಶೇಟ್ ತಾನಾವಡೆ ವಿರುದ್ಧ ಕಾಂಗ್ರೆಸ್ ದೂರು
Team Udayavani, Mar 22, 2024, 3:21 PM IST
ಪಣಜಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಸದಾನಂದ ಶೇಟ್ ತಾನಾವಡೆ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದಿಂದ ಮುಖ್ಯ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.
ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಮಿತ್ ಪಾಟ್ಕರ್ ಈ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ಉತ್ತರ ಗೋವಾ ಜಿಲ್ಲಾಧ್ಯಕ್ಷ ವೀರೇಂದ್ರ ಶಿರೋಡ್ಕರ್, ಸಾಂತಾಕ್ರೂಜ್ ಗ್ರೂಪ್ ಅಧ್ಯಕ್ಷ ಜಾನ್ ನಜರೆತ್, ಪಣಜಿ ಮಹಿಳಾ ಮಂಡಲದ ಅಧ್ಯಕ್ಷೆ ಲವೇನಿಯಾ ಡಿಕೋಸ್ತಾ, ಜುಝೆ ಕಾರ್ಮಿನೋ ಮತ್ತು ಇಕ್ಬಾಲ್ ಶೇಖ್ ಉಪಸ್ಥಿತರಿದ್ದರು. ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಲಿದೆ. ಇದಲ್ಲದೇ ದೂರನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು ಎಂದು ಪಾಟ್ಕರ್ ತಿಳಿಸಿದ್ದಾರೆ.
ಮಹಾಭಾರತ ಮತ್ತು ರಾಮಾಯಣದ ವಿಭಿನ್ನ ಶಕ್ತಿಗಳ ಉದಾಹರಣೆಗಳನ್ನು ಉಲ್ಲೇಖಿಸಿದ ಪಾಟ್ಕರ್, ಮುಂಬೈನ ಶಿವತೀರ್ಥದಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಹಿಂದೂ ಧರ್ಮದ ಶಕ್ತಿಗಳನ್ನು ಪ್ರಸ್ತಾಪಿಸಿದರು. ಮಹಾಭಾರತವು ಪಾಂಡವರು ಮತ್ತು ಕೌರವರ ಶಕ್ತಿಯನ್ನು ಹೊಂದಿದೆ, ರಾಮಾಯಣವು ಶ್ರೀರಾಮ ಮತ್ತು ರಾವಣನ ಶಕ್ತಿಯನ್ನು ಹೊಂದಿದೆ.
ನಮ್ಮ ನಾಯಕ ರಾಹುಲ್ ಗಾಂಧಿ ಸತ್ಯದ ಶಕ್ತಿಯ ಪರವಾಗಿ ನಿಂತಿದ್ದಾರೆ. ಬಿಜೆಪಿ ಮತ್ತು ರಾಜ್ಯಾಧ್ಯಕ್ಷ ತನವಾಡೆಯವರಿಗೆ ಇರುವ ಶಕ್ತಿ ಮಾತ್ರ ಗೊತ್ತಿರಬೇಕು. ರಾಹುಲ್ ಗಾಂಧಿ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಿಸಲು ಬಿಜೆಪಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಬಿಜೆಪಿ ಧರ್ಮ ದುರುಪಯೋಗ ಮಾಡುವ ಮೂಲಕ ಜನರಲ್ಲಿ ನಕಾರಾತ್ಮಕತೆಯನ್ನು ಹರಡುವ ಕೆಲಸ ಮಾಡುತ್ತಿದೆ ಎಂದು ಅಮಿತ್ ಪಾಟ್ಕರ್ ಹೇಳಿಕೆ ನೀಡಿದ್ದಾರೆ.
ಕಠಿಣ ಕ್ರಮ ಕೈಗೊಳ್ಳಬೇಕು!
ಚುನಾವಣಾ ಆಯೋಗದ ನೀತಿ ಸಂಹಿತೆ ಕುರಿತು ನಿಯಮಾನುಸಾರ ತನವಾಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಿಜೆಪಿ ಅರ್ಥದ ವಿಪತ್ತು ಮಾಡುತ್ತಿದ್ದಾರೆ. ಬಿಜೆಪಿ ತನ್ನ ಕೆಲಸದ ವರದಿಯನ್ನು ಜನರ ಮುಂದಿಡಬೇಕು. ‘ವಿಕಸಿತ್ ಭಾರತ್’ ಕಾರ್ಯಕ್ರಮವನ್ನು ತೆಗೆದುಕೊಳ್ಳುವ ಮೂಲಕ ಬಿಜೆಪಿ ಜನರಿಗೆ ಲಾಲಿಪಾಪ್ಗಳನ್ನು ತೋರಿಸುತ್ತಿದೆ ಎಂದು ಪಾಟ್ಕರ್ ಆರೋಪಿಸಿದರು.
ಇದನ್ನೂ ಓದಿ: ‘Own deeds’; ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ ಅಣ್ಣಾ ಹಜಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’