ಲಿಂಗಾಯತ ಸಮಾಜದ ಜನತೆಯ ರುದ್ರಭೂಮಿಯ ಅಭಿವೃದ್ಧಿಕಾರ್ಯ ಸರ್ಕಾರದ ಮೂಲಕ ನೇರವೇರಿಸಲಾಗುವುದು: ಶಾಸಕ ಅಮೋಣಕರ್
Team Udayavani, Dec 20, 2022, 3:58 PM IST
ಪಣಜಿ: ಗೋವಾದಲ್ಲಿ ಲಿಂಗಾಯತ ಸಮಾಜದ ಜನತೆಯ ರುದ್ರಭೂಮಿಯ ಅಭಿವೃದ್ಧಿ ಕಾರ್ಯವನ್ನು ಸರ್ಕಾರದ ಮೂಲಕ ನೆರವೇರಿಸಿಕೊಡಲಾಗುವುದು. ಅಂತೆಯೇ ಶ್ರೀ ಬಸವ ಸೇವಾ ಟ್ರಸ್ಟ್ ಗೂ ಕೂಡ ಎಲ್ಲ ಅಗತ್ಯ ಸಹಾಯ ನೀಡುತ್ತೇನೆ ಎಂದು ಶಾಸಕ ಸಂಕಲ್ಪ ಅಮೋಣಕರ್ ಭರವಸೆ ನೀಡಿದರು.
ಗೋವಾ ವಾಸ್ಕೊದ ರವೀಂದ್ರ ಭವನದಲ್ಲಿ ಆಯೋಜಿಸಿದ್ದ ಶ್ರೀಗುರು ಬಸವ ಸೇವಾ ಟ್ರಸ್ಟ್ ಮುರಗಾಂವ ಇದರ ಉಧ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಇಲ್ಲಿ ಲಿಂಗಾಯತ ಸಮಾಜದ ಜನರ ರುದ್ರ ಭೂಮಿಯಲ್ಲಿ ಕೆಲ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಲಾಗಿದೆ. ರುದ್ರಭೂಮಿಯ ಅಭಿವೃದ್ಧಿ ಕಾರ್ಯವನ್ನು ಸರ್ಕಾರದ ಮುಖೇನವಾಗಿ ನೆರವೇರಿಸಿ ಕೊಡುತ್ತೇನೆ. ಇಷ್ಟೇ ಅಲ್ಲದೆಯೇ ಇಲ್ಲಿ ಕನ್ನಡಿಗರಿಗೆ ಮತ್ತು ನಿಮ್ಮ ಟ್ರಸ್ಟ್ ಗೆ ಅಗತ್ಯ ಸಹಾಯ ಸಹಕಾರ ನೀಡುತ್ತೇನೆ. ಮುಂಬರುವ ದಿನಗಳಲ್ಲಿ ಈ ಟ್ರಸ್ಟ್ ಮೂಲಕ ಇಲ್ಲಿನ ಜನತೆಗೆ ಹೆಚ್ಚು ಸಹಾಯ ಲಭಿಸಲಿ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಶರಣ ಸಾಹಿತ್ಯ ಪರಿಷತ್ ಹಾವೇರಿ ಅಧ್ಯಕ್ಷ ಮಾರುತಿ ಶಿಡ್ಲಾಪುರ ಮಾತನಾಡಿ, ಬಸವಣ್ಣನವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಅವರ ದಾರಿಯಲ್ಲಿ ನಾವೆಲ್ಲರೂ ಸಾಗಿ ಸಮಾಜವನ್ನು ಮುನ್ನಡೆಸೋಣ ಎಂದರು.
ಈ ಸಂದರ್ಭದಲ್ಲಿ ಶ್ರೀಗುರು ಬಸವ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಸವರಾಜ್ ಇಂಗಳಳ್ಳಿ ವೇದಿಕೆಯ ಮೇಲೆ ಉಪಸ್ಥಿತರಿದ್ದು, ಈ ಸೇವಾ ಟ್ರಸ್ಟ್ ನ ದ್ಯೇಯೋಧ್ಧೇಶಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರದಲ್ಲಿ ಗೋವಾದ ವಿವಿಧ ಭಾಗಗಳಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ