Panaji : ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಒಂಬತ್ತು ವಿದ್ಯಾರ್ಥಿಗಳ ರಕ್ಷಣೆ


Team Udayavani, Jan 1, 2024, 4:45 PM IST

Panaji : ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಒಂಬತ್ತು ವಿದ್ಯಾರ್ಥಿಗಳ ರಕ್ಷಣೆ

ಪಣಜಿ: ಬೆಳಗಾವಿಯ ಶಿಕ್ಷಣ ಸಂಸ್ಥೆಯೊಂದರ ಒಂಬತ್ತು ವಿದ್ಯಾರ್ಥಿಗಳು ಚಾರಣಕ್ಕೆಂದು ಕಣಕುಂಬಿ ಕಾಡಿನಲ್ಲಿ ದಾರಿ ತಪ್ಪಿದ್ದು ಗೋವಾ ಮತ್ತು ಕರ್ನಾಟಕ ಅರಣ್ಯಾಧಿಕಾರಿಗಳು ಎಂಟು ಗಂಟೆಗಳ ಜಂಟಿ ಶೋಧ ಕಾರ್ಯಾಚರಣೆಯ ನಂತರ ಎಲ್ಲ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಕ್ಕಿರುವ ಮಾಹಿತಿ ಪ್ರಕಾರ ಬೆಳಗಾವಿಯ ಶಿಕ್ಷಣ ಸಂಸ್ಥೆಯೊಂದರ ಒಂಬತ್ತು ವಿದ್ಯಾರ್ಥಿಗಳು ಡಿ.29ರಂದು ದ್ವಿಚಕ್ರವಾಹನದಲ್ಲಿ ಸವಾರಿಗೆ ತೆರಳಿದ್ದರು. ಕರ್ನಾಟಕ-ಗೋವಾ ಗಡಿಭಾಗದ ಪರ್ವಾಡ ಗ್ರಾಮದ ಬಳಿಯ ದಟ್ಟ ಕಾಡಿನಲ್ಲಿ ಜವಾನಿ ಜಲಪಾತಕ್ಕೆ ಹೊರಟಿದ್ದಾರೆ. ವಿದ್ಯಾರ್ಥಿಗಳು ದ್ವಿಚಕ್ರವಾಹನದಲ್ಲಿ ಮೂರು ಕಿಲೋಮೀಟರ್ ದೂರದ ಅರಣ್ಯಕ್ಕೆ ತೆರಳಿದರು. ಆ ನಂತರ ಮರದ ಕೆಳಗೆ ಮೋಟಾರ್ ಸೈಕಲ್ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಪ್ರಯಾಣಿಸಿದರೂ ವಾಪಸ್ ಬರುವಾಗ ದಾರಿ ತಪ್ಪಿದ್ದಾರೆ. ರಸ್ತೆ ತಪ್ಪಿದೆ ಎಂದು ಅರಿವಾದ ಕೂಡಲೇ ಕಾಲೇಜು ಗೆಳೆಯರಿಗೆ ರಾತ್ರಿ ವೇಳೆ ಸಂದೇಶ ಕಳುಹಿಸಿ ಸಹಾಯ ಕೋರಿ ಕಾಡಿನಲ್ಲಿ ದಾರಿ ತಪ್ಪಿರುವುದಾಗಿ ತಿಳಿಸಿದರು. ಕೂಡಲೇ ಸ್ನೇಹಿತರು ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಎಸಿಎಫ್ ಸಂತೋಷ್ ಚವ್ಹಾಣ್ ನೇತೃತ್ವದ ತಂಡವು ಡಿಸೆಂಬರ್ 29 ರ ರಾತ್ರಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಜೊತೆಗೆ ಗೋವಾ ಅರಣ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಕೊನೆಗೂ ಎಂಟು ಗಂಟೆಗಳ ಹುಡುಕಾಟದ ಬಳಿಕ ಗೋವಾದ ಅರಣ್ಯದಲ್ಲಿ ವಿದ್ಯಾರ್ಥಿಗಳೆಲ್ಲ ಪತ್ತೆಯಾಗಿದ್ದಾರೆ.

ಬಂಡೆಯೊಂದರ ಬಳಿ ಆಶ್ರಯ ಪಡೆದಿದ್ದರು. ಅರಣ್ಯಾಧಿಕಾರಿಗಳು ಕಣಕುಂಬಿ ವಲಯ ಅರಣ್ಯಾಧಿಕಾರಿಗಳ ಕಚೇರಿಗೆ ಕರೆತಂದಿದ್ದು, ಹಿರಿಯರಿಗೆ ಹಸ್ತಾಂತರಿಸುವ ಮುನ್ನ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅರಣ್ಯದಲ್ಲಿ ಅತಿಕ್ರಮ ಪ್ರವೇಶ ಮಾಡಿದ ಒಂಬತ್ತು ವಿದ್ಯಾರ್ಥಿಗಳ ವಿರುದ್ಧ ಗೋವಾ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದು, ಬಾಲಕರ ಬಗ್ಗೆ ಅವರ ಪೋಷಕರು ಹಾಗೂ ಕಾಲೇಜು ಪ್ರಾಂಶುಪಾಲರಿಗೆ ಮಾಹಿತಿ ನೀಡಲಾಗಿದೆ.

ಆರ್‍ಎಫ್‍ಒ ಶಿವಕುಮಾರ್, ರಾಕೇಶ್ ಅರ್ಜುನ್‍ವಾಡ್ ಮತ್ತು ನಾಗರಾಜ್ ಬಾಳೆಹೊಸೂರು, ಡಿಆರ್‍ಎಫ್‍ಒ ವಿನಾಯಕ್ ಪಾಟೀಲ್, ಗೋವಾ ಡಿಎಫ್‍ಒ ಆನಂದ್ ಸೇರಿದಂತೆ ಕರ್ನಾಟಕ ಮತ್ತು ಗೋವಾದ ಅರಣ್ಯ ಸಿಬ್ಬಂದಿ ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Mangaluru: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.