ನೀತಿ ಆಯೋಗದ ನೂತನ ಸಿಇಒ ಆಗಿ ಪರಮೇಶ್ವರನ್ ಅಯ್ಯರ್ ನೇಮಕ
Team Udayavani, Jun 24, 2022, 10:30 PM IST
ನವದೆಹಲಿ: ನೀತಿ ಆಯೋಗಕ್ಕೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಪರಮೇಶ್ವರ್ ಅಯ್ಯರ್ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಆಗಿ ನೇಮಕ ಮಾಡಲಾಗಿದೆ.
ಕೇಂದ್ರ ಸರ್ಕಾರವು ಈ ಕುರಿತು ಶುಕ್ರವಾರ ಪ್ರಕಟಣೆ ಹೊರಡಿಸಿದೆ. ಪರಮೇಶ್ವರ್ ಅವರು ಉತ್ತರ ಪ್ರದೇಶ ಕೇಡರ್ನ 1981ನೇ ಐಎಎಸ್ ಬ್ಯಾಚ್ ಅಧಿಕಾರಿ.
ಪರಮೇಶ್ವರ್ ಅವರು ನೈರ್ಮಲ್ಯ ತಜ್ಞರಾಗಿಯೇ ಪ್ರಸಿದ್ಧರಾದವರು. 2016ರಿಂದ 2020ರವರೆಗೆ ಪ್ರಧಾನಿ ಮೋದಿ ಸರ್ಕಾರದ “ಸ್ವತ್ಛ ಭಾರತ ಅಭಿಯಾನ’ವನ್ನು ಮುನ್ನಡೆಸುವ ಮೂಲಕ ಹೆಸರುವಾಸಿಯಾಗಿದ್ದರು. ವಿಶ್ವಸಂಸ್ಥೆಯಲ್ಲಿ ಗ್ರಾಮೀಣ ಜಲ ನೈರ್ಮಲ್ಯ ತಜ್ಞರಾಗಿಯೂ ಕೆಲಸ ನಿರ್ವಹಿಸಿದ್ದಾರೆ.
ಇದೇ ವೇಳೆ ಭಾರತದ ಗುಪ್ತಚರ ಇಲಾಖೆಗೆ ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ತಪನ್ ಕುಮಾರ್ ದೇಕ ಅವರನ್ನು ನೇಮಕ ಮಾಡಲಾಗಿದೆ. ಈವರೆಗೆ ಇಲಾಖೆಯ ವಿಂಗ್ ಆಪರೇಷನ್ಗಳನ್ನು ನಿರ್ವಹಿಸುತ್ತಿದ್ದ ತಪನ್ ಅವರು 2 ವರ್ಷಗಳ ಕಾಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರು ಹಿಮಾಚಲದ 1988ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಹಾಗೆಯೇ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ(ರಾ)ದ ಮುಖ್ಯಸ್ಥಾಗಿರುವ ಸಮಂತ್ ಗೋಯೆಲ್ ಅವರ ಅಧಿಕಾರಾವಧಿಯನ್ನು ಒಂದು ವರ್ಷದ ಕಾಲ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ