ನಾಸೀರುದ್ದೀನ್ ಶಾ ವಾಕ್ ಸ್ವಾತಂತ್ರ್ಯ ಹೇಳಿಕೆ: ಪರೇಶ್ ಟಾಂಗ್
Team Udayavani, Jan 8, 2019, 11:17 AM IST
ಮುಂಬಯಿ : ದೇಶದಲ್ಲಿನ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಬಾಲಿವುಡ್ ಹಿರಿಯ ನಟ ನಾಸೀರುದ್ದೀನ್ ಶಾ ಈಚೆಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ನೀಡಿರುವ ಬಾಲಿವುಡ್ ನಟ ಮತ್ತು ಬಿಜೆಪಿ ಸಂಸದ ಪರೇಶ್ ರಾವಲ್ ಅವರು “ನೀವು ಮುಕ್ತವಾಗಿ ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದೀರಿ ಎಂದರೆ ದೇಶದಲ್ಲಿ ಪೂರ್ಣ ವಾಕ್ ಸ್ವಾತಂತ್ರ್ಯ ಇದೆ ಎಂದರ್ಥ’ ಎಂದು ಹೇಳಿದ್ದಾರೆ.
“ನಿಮ್ಮ ನಿರ್ದಿಷ್ಟ ಹೇಳಿಕೆಗೆ ಪ್ರತಿಕ್ರಿಯಿಸಲು ನಾನು ಬಯಸುವುದಿಲ್ಲ; ಆದರೆ ಭಾರತದಲ್ಲಿ ಬದುಕುವುದರಲ್ಲಿ ಅರ್ಥ ಇಲ್ಲ ಎಂದು ನೀವು ಹೇಳಿರುವುದು ಸರಿಯಲ್ಲ; ನಾನದನ್ನು ಒಪ್ಪುವುದಿಲ್ಲ. ಘಟನೆಗಳು ನಡೆಯುತ್ತಲೇ ಇರುತ್ತವೆ; ಅವನ್ನು ಸಾಮಾನ್ಯಿಕರಿಸುವುದು ಸರಿಯಲ್ಲ’ ಎಂದು ಪರೇಶ್ ರಾವ್ ಎಎನ್ಐ ಜತೆಗೆ ಮಾತನಾಡುತ್ತಾ ಹೇಳಿದರು.
ಜನವರಿ 4ರಂದು ನಾಸಿರುದ್ದೀನ್ ಶಾ ಅವರು ವಿಡಿಯೋ ಒಂದರಲ್ಲಿ “ಈ ದೇಶದಲ್ಲಿ ಹಕ್ಕು ಆಗ್ರಹಿಸುವವರಿಗೆ ಬೀಗ ಜಡಿಯಲಾಗುತ್ತದೆ. ಕಲಾವಿದರು, ನಟರು, ಕವಿಗಳು, ಚಿಂತಕರು ಮತ್ತು ಜ್ಞಾನವೇತ್ತರ ಧ್ವನಿಯನ್ನು ಹಿಸುಕಲಾಗುತ್ತಿದೆ; ಪತ್ರಕತರ ಬಾಯಿಯನ್ನೂ ಮುಚ್ಚಲಾಗುತ್ತಿದೆ’ ಎಂದು ಹೇಳಿದ್ದರು.
“ದೇಶದಲ್ಲಿ ದ್ವೇಷದ ಗೋಡೆಗಳನ್ನು ನಿರ್ಮಿಸಲಾಗುತ್ತಿದೆ; ಧರ್ಮದ ಹೆಸರಿನಲ್ಲಿ ಅಮಾಯಕರನ್ನು ಕೊಲ್ಲಲಾಗುತ್ತಿದೆ; ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿದವರ ಕಚೇರಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಮತ್ತು ಅವರ ಲೈಸನ್ಸ್ ರದ್ದು ಮಾಡಲಾಗುತ್ತದೆ’ ಎಂದು ನಾಸಿರುದ್ದೀನ್ ಶಾ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ