ಗುಜರಾತ್: ಸಿಲಿಂಡರ್ ಇಟ್ಕೊಂಡು ಏನ್ ಮಾಡ್ತೀರಾ? ಪರೇಶ್ ರಾವಲ್ ಹೇಳಿಕೆಗೆ ಆಕ್ರೋಶ, ಕ್ಷಮೆಯಾಚನೆ!
ಗುಜರಾತ್ ನ ಜನರು ಈಗಲೂ ಹಣದುಬ್ಬರವನ್ನು ಸಹಿಸಿಕೊಳ್ಳಬಹುದು,
Team Udayavani, Dec 2, 2022, 5:10 PM IST
ಅಹಮದಾಬಾದ್: ಕಡಿಮೆ ದರದಲ್ಲಿ ಅಡುಗೆ ಅನಿಲದ ಸಿಲಿಂಡರ್ ಪಡೆದುಕೊಂಡು ಏನು ಮಾಡುತ್ತೀರಿ…ಅದರಿಂದ ಬಂಗಾಳಿಯವರಿಗೆ ಮೀನು ಬೇಯಿಸಿ ಕೊಡುತ್ತೀರಾ? ಎಂದು ಬಾಲಿವುಡ್ ನಟ, ರಾಜಕಾರಣಿ ಪರೇಶ್ ರಾವಲ್ ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮತದಾರರ ಬಳಿ ಪ್ರಶ್ನಿಸಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕ್ಷಮೆಯಾಚಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಹೊಸ ವರ್ಷದಲ್ಲಿ ಇಂಧನ ದರ ಇಳಿಕೆ? ಗ್ರಾಹಕರ ಮೇಲಿನ ಹೊರೆ ಇಳಿಕೆಗೆ ಸಚಿವ ಸುನಿಲ್ ಸೂಚನೆ
ಚುನಾವಣೆಗೆ ದಿನಗಣನೆ ಆರಂಭವಾಗಿರುವ ಗುಜರಾತ್ ನ ವಲ್ಸಾಡ್ ನಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದ ಪರೇಶ್ ರಾವಲ್ ಈ ಹೇಳಿಕೆ ನೀಡಿದ್ದರು. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪರೇಶ್, ಗುಜರಾತ್ ನ ಜನರು ಈಗಲೂ ಹಣದುಬ್ಬರವನ್ನು ಸಹಿಸಿಕೊಳ್ಳಬಹುದು, ಆದರೆ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾಗಳನ್ನಲ್ಲ ಎಂದು ತಿಳಿಸಿದ್ದರು.
ಜನರಿಗೆ ಉದ್ಯೋಗವೂ ದೊರೆಯುತ್ತದೆ. ಆದರೆ ಒಂದು ವೇಳೆ ದೆಹಲಿ ರೀತಿ ಬಾಂಗ್ಲಾದೇಶ ಮತ್ತು ರೋಹಿಂಗ್ಯಾ ವಲಸಿಗರು ನಿಮ್ಮ ಸುತ್ತಮುತ್ತ ವಾಸಿಸಲು ಆರಂಭಿಸಿದರೆ ಏನಾಗಬಹುದು? ಗ್ಯಾಸ್ ಸಿಲಿಂಡರ್ ಬೆಲೆ ದುಬಾರಿಯಾಗಿದೆ, ಆದರೆ ಅದರ ಬೆಲೆ ಕಡಿಮೆಯಾಗಬಹುದು. ಸಿಲಿಂಡರ್ ಇಟ್ಟುಕೊಂಡು ಏನು ಮಾಡುತ್ತೀರಿ, ಬಂಗಾಲಿಗಳಿಗೆ ಮೀನು ಬೇಯಿಸಿ ಕೊಡುತ್ತೀರಾ? ಎಂದು ಪರೇಶ್ ರಾವಲ್ ಪ್ರಶ್ನಿಸಿದ್ದರು.
ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿರುವ ಪರೇಶ್, ನಾನು ಬಂಗಾಲಿ ಅಂತ ಹೇಳಿದ್ದು, ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಗ್ಗೆ. ಹೌದು ಮೀನಿನ ವಿಚಾರ ಅನಗತ್ಯ, ಯಾಕೆಂದರೆ ಗುಜರಾತಿಗಳು ಕೂಡಾ ಮೀನಿನ ಅಡುಗೆ ಮಾಡಿ ತಿನ್ನುತ್ತಾರೆ. ಆದರೆ ನಾನು ಬೆಂಗಾಲಿ ಅಂತ ಹೇಳಿದ್ದು ಬಾಂಗ್ಲಾ ಮತ್ತು ರೋಹಿಂಗ್ಯಾ ಅಕ್ರಮ ವಲಸಿಗರ ಬಗ್ಗೆ. ಒಂದು ವೇಳೆ ನನ್ನ ಹೇಳಿಕೆ ಯಾರಿಗಾದರೂ ನೋವನ್ನುಂಟು ಮಾಡಿದ್ದರೆ ಕ್ಷಮೆಯಾಚಿಸುವುದಾಗಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
MUST WATCH
ಹೊಸ ಸೇರ್ಪಡೆ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!