ಕರುಣಾಗೆ ಗೌರವ; ಕಲಾಪ ಮುಂದೂಡಿಕೆ, ಲೋಕಸಭೆ ಇತಿಹಾಸದಲ್ಲಿ ಮೊದಲು!
Team Udayavani, Aug 8, 2018, 2:21 PM IST
ನವದೆಹಲಿ: ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ವರಿಷ್ಠ, ಮಾಜಿ ಸಿಎಂ ಕರುಣಾನಿಧಿ ಅವರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಸಂತಾಪ ಸೂಚಿಸಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಬುಧವಾರ ಮುಂದೂಡಲಾಯಿತು. ಯಾವತ್ತೂ ಸಂಸದರಾಗಿರದ ವ್ಯಕ್ತಿಯೊಬ್ಬರಿಗೆ ಸಂತಾಪ ಸಲ್ಲಿಸಿ ಕಲಾಪವನ್ನು ಮುಂದೂಡಿರುವುದು ಲೋಕಸಭೆ ಇತಿಹಾಸದಲ್ಲಿಯೇ ಮೊದಲನೆಯದ್ದಾಗಿದೆ!
ಕಳೆದ ಆರು ದಶಕಗಳಿಂದ ಮುತುವೇಲು ಕರುಣಾನಿಧಿ ಅವರು ತಮಿಳುನಾಡು ವಿಧಾನಸಭೆಯಲ್ಲಿ ಸದಸ್ಯರಾಗಿದ್ದವರು, 5 ಬಾರಿ ಮುಖ್ಯಮಂತ್ರಿಯಾಗಿ ಹಾಗೂ 50 ವರ್ಷಗಳ ಕಾಲ ಪ್ರಾದೇಶಿಕ ಡಿಎಂಕೆ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದರು.
ಈ ಹಿನ್ನೆಲೆಯಲ್ಲಿ ಸಂಸದರಾಗದೇ ಇದ್ದ ಹಾಗೂ ಮಾಜಿ ಸಿಎಂಗೆ ಗೌರವ ಸಲ್ಲಿಸಿ ಕಲಾಪ ಮುಂದೂಡಿರುವುದು ಲೋಕಸಭೆಯಲ್ಲೇ ಪ್ರಥಮ ಬಾರಿಯಾಗಿದೆ ಎಂದು ವರದಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಸಿಎಂ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ದೆಹಲಿ ಸಿಎಂ ಕೇಜ್ರಿವಾಲ್, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ಸೇರಿದಂತೆ ಹಲವಾರು ಗಣ್ಯರು ಅಸ್ತಂಗತರಾದ ಎಂ.ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸಂಜೆ ಮರೀನಾ ಬೀಚ್ ನಲ್ಲಿ ಎಂ.ಕರುಣಾನಿಧಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ