ಶಿಶುಕಾಮಿಗಳಿಗೆ ಗಲ್ಲು, ಎನ್ಸಿಬಿಸಿ ವಿಧೇಯಕಕ್ಕೆ ಸಂಸತ್ ಅಂಗೀಕಾರ
Team Udayavani, Aug 6, 2018, 11:33 PM IST
ನವದೆಹಲಿ: ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ (ಎನ್ಸಿಬಿಸಿ)ಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವ ವಿಧೇಯಕಕ್ಕೆ ಸೋಮವಾರ ರಾಜ್ಯಸಭೆ ಅಂಗಿಗೀಕಾರ ನೀಡಿದೆ. ಹಿಂದುಳಿದ ವರ್ಗಗಳ ಮೇಲೆ ಕಾಂಗ್ರೆಸ್ಗೆ ನಿಜಕ್ಕೂ ಕಾಳಜಿಯಿದ್ದರೆ ಲೋಕಸಭೆಯಲ್ಲಿ ಪಾಸ್ ಆಗಿರುವ ಈ ವಿಧೇಯಕಕ್ಕೆ ರಾಜ್ಯಸಭೆಯಲ್ಲೂ ಅಂಗೀಕಾರ ಸಿಗುವಂತೆ ಬೆಂಬಲ ನೀಡಲಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸವಾಲು ಹಾಕಿದ್ದರು. ಇದರ ಮಾರನೇ ದಿನವೇ ರಾಜ್ಯಸಭೆಯಲ್ಲೂ ವಿಧೇಯಕ ಪಾಸ್ ಆಗಿದೆ.
ವಿಧೇಯಕಕ್ಕೆ ಸಂಬಂಧಿಸಿದ ಚರ್ಚೆಯ ವೇಳೆ ಜಾತಿ ಗಣತಿಯ ವರದಿ ಬಹಿರಂಗ ಮಾಡಿ, ಅದಕ್ಕೆ ಅನುಸಾರವಾಗಿ ಮೀಸಲು ವ್ಯವಸ್ಥೆ ಜಾರಿ ಮಾಡಬೇಕೆಂದು ಹಲವು ಸದಸ್ಯರು ಒತ್ತಾಯಿಸಿದ್ದಾರೆ. ಇದೇ ವೇಳೆ, 12 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕ್ರಿಮಿನಲ್ ಕಾನೂನು (ತಿದ್ದು ಪಡಿ) ವಿಧೇಯಕಕ್ಕೂ ಸೋಮವಾರ ರಾಜ್ಯಸಭೆಯಲ್ಲಿ ಅಂಗೀ ಕಾರ ಸಿಕ್ಕಿದೆ. ಎರಡೂ ಮನೆಗಳಲ್ಲಿ ವಿಧೇಯಕ ಅಂಗೀಕಾರಗೊಂಡಿದೆ.
ಎಸ್ಸಿ, ಎಸ್ಟಿ ವಿಧೇಯಕಕ್ಕೆ ಅಸ್ತು: ಈ ನಡುವೆ, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಮೂಲ ಸ್ವರೂಪವನ್ನು ಪುನರ್ ಜಾರಿ ಮಾಡುವ ಹೊಸ ತಿದ್ದುಪಡಿ ವಿಧೇ ಯಕಕ್ಕೆ ಸೋಮವಾರ ಲೋಕಸಭೆ ಅಂಗೀ ಕಾರ ನೀಡಿದೆ. ಮಾ.20ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳು ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಿದಂತಾಗಿದೆ ಎಂದು ಆರೋಪಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ