ಬಜೆಟ್ ಅಧಿವೇಶನ ಇಂದೇ ಮುಕ್ತಾಯ? ಉದ್ದೇಶಿಸಿದ್ದ ಮಸೂದೆಗಳಿಗೆಲ್ಲ ಅನುಮೋದನೆ
ಅವಧಿಗಿಂತ ಮೊದಲೇ ಮುಕ್ತಾಯ ಸಾಧ್ಯತೆ
Team Udayavani, Apr 7, 2022, 6:55 AM IST
ಹೊಸದಿಲ್ಲಿ: ಸಂಸತ್ನ ಬಜೆಟ್ ಅಧಿವೇಶನ ಶುಕ್ರವಾರ (ಎ.8)ರ ಬದಲಾಗಿ ಗುರುವಾರ (ಎ.7)ವೇ ಮುಕ್ತಾಯವಾಗುವ ಸಾಧ್ಯತೆ ಇದೆ.
ಜ.31ರಂದು ಅಧಿವೇಶನ ಶುರುವಾಗಿತ್ತು. ಒಂದು ದಿನ ಮೊದಲೇ ಅಧಿವೇಶನ ಮುಂದೂಡುವ ಬಗ್ಗೆ ವಿವಿಧ ಪಕ್ಷಗಳ ಸದನ ನಾಯಕರ ಜತೆಗೆ ಲೋಕಸಭೆ ಮತ್ತು ರಾಜ್ಯಸಭೆ ಕಾರ್ಯಾಲಯಗಳ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ.
ಮುಂಗಾರು ಅಧಿವೇಶನದ ವೇಳೆಯೂ ಅವಧಿಗಿಂತ ಮುನ್ನವೇ ಮುಂದೂಡಿಕೆಯಾಗಿತ್ತು. ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಸಹಮತ ಮೂಡಿದ್ದರಿಂದ ಉದ್ದೇಶಿತ ಮಸೂದೆಗಳಿಗೆಲ್ಲ ಅನುಮೋದನೆ ಪಡೆದುಕೊಳ್ಳಲಾಗಿದೆ.
ಮಸೂದೆಗೆ ಅನುಮೋದನೆ: ಸಮೂಹ ವಿನಾಶಕ ಶಸ್ತ್ರಾಸ್ತ್ರಗಳಿಗೆ ವಿತ್ತೀಯ ನೆರವಿಗೆ ತಡೆ ನೀಡುವ ಮಸೂದೆಗೆ ಲೋಕಸಭೆಯಲ್ಲಿ ಸರ್ವಾನುಮತದಿಂದ ಅನುಮೋದನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಸೂದೆ ಅಂಗೀಕಾರದಿಂದ ದೇಶದ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಸರಕಾರದ ನಿಲುವಿಗೆ ಮತ್ತಷ್ಟು ಸಮರ್ಥನೆ ದೊರೆತಿದೆ ಎಂದು ಹೇಳಿದ್ದಾರೆ.
ಜತೆಗೆ ಸಮೂಹ ವಿನಾಶಕ ಶಸ್ತ್ರಾಸ್ತ್ರಗಳ ವಿರುದ್ಧ ಭಾರತ ಹೊಂದಿರುವ ನಿಲುವಿಗೂ ಜಗತ್ತಿನಲ್ಲಿ ಬೆಂಬಲ ಸಿಗಲಿದೆ ಎಂದಿದ್ದಾರೆ.
ಇದನ್ನೂ ಓದಿ:ರಾಜ್ಯದ 75 ಕೆರೆ ಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ: ಸಿಎಂ
1.2 ಲಕ್ಷ ಟವರ್: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಶೀಘ್ರವೇ 4ಜಿ ತಂತ್ರಜ್ಞಾನ ಜಾರಿಗೊಳಿಸಲಿದೆ. ಗ್ರಾಹಕರ ಅನುಕೂಲಕ್ಕಾಗಿ 1.12 ಲಕ್ಷ ಮೊಬೈಲ್ ಟವರ್ಗಳನ್ನು ಸ್ಥಾಪಿಸಲಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದ್ದಾರೆ.
14 ಹಿಂದೂಗಳ ಹತ್ಯೆ: ಜಮ್ಮು ಮತ್ತು ಕಾಶ್ಮೀರದಲ್ಲಿ 2019ರಿಂದ ಈಚೆಗೆ ಭಯೋತ್ಪಾದಕರಿಂದ ನಾಲ್ವರು ಕಾಶ್ಮೀರಿ ಪಂಡಿತರೂ ಸೇರಿದಂತೆ 14 ಮಂದಿ ಹಿಂದೂಗಳು ಕೊಲ್ಲಲ್ಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಗೆ ತಿಳಿಸಿದ್ದಾರೆ.
ವಿಶೇಷ ಸ್ಥಾನಮಾನ ವಾಪಸ್ ಬಳಿಕದ ಪರಿಸ್ಥಿತಿಯಲ್ಲಿ 87 ಮಂದಿ ನಾಗರಿಕರು ಮತ್ತು 99 ಮಂದಿ ಭದ್ರತಾ ಸಿಬಂದಿ ಅಸುನೀಗಿದ್ದಾರೆ ಎಂದರು ರಾಯ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು