Parliament ;ದುಸ್ಸಾಹಸ ಮೆರೆದಿದ್ದು 6 ಮಂದಿ: ಇನ್ನಿಬ್ಬರಿಗಾಗಿ ತೀವ್ರ ಶೋಧ
ಯಾವುದೇ ಸಂಘಟನೆಯೊಂದಿಗೆ ಒಡನಾಟವಿಲ್ಲ?
Team Udayavani, Dec 13, 2023, 5:24 PM IST
ಹೊಸದಿಲ್ಲಿ: ಲೋಕಸಭಾ ಕಲಾಪದ ವೇಳೆ ಸಂಸತ್ ನೊಳಕ್ಕೆ ನುಗ್ಗಿ ದುಷ್ಕೃತ್ಯ ಎಸಗಲು ಒಟ್ಟು ಆರು ಮಂದಿ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಲೋಕಸಭೆಯೊಳಗೆ ನುಗ್ಗಿದ ಇಬ್ಬರು ಸೇರಿ ಒಟ್ಟು ನಾಲ್ವರನ್ನು ಸಂಸತ್ ಭವನದ ಭದ್ರತಾ ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಸಂಸತ್ ನೊಳಗೆ ಪಾಸ್ ಪಡೆದು ತೆರಳಿದ್ದ ಇಬ್ಬರು ಸಾರ್ವಜನಿಕ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಪ್ರದೇಶಕ್ಕೆ ಜಿಗಿದು, ಹಳದಿ ಬಣ್ಣದ ಸ್ಪ್ರೇ ಹೊಡೆದು ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಸಂಸದರು ಇಬ್ಬರನ್ನು ಥಳಿಸಿದ್ದಾರೆ. ಭದ್ರತಾ ಪಡೆಗಳ ಕಣ್ತಪ್ಪಿಸಿ ಶೂ ಗಳ ಒಳಗೆ ಕಲರ್ ಸ್ಪ್ರೇ ತೆಗೆದುಕೊಂಡು ಹೋಗಿದ್ದರು ಎನ್ನುವುದು ಸ್ಪಷ್ಟವಾಗಿದೆ.
ಇದನ್ನೂ ಓದಿ: Parliament: ಸಂಸತ್ ಗೆ ನುಗ್ಗಿದ ಇಬ್ಬರ ಗುರುತು ಪತ್ತೆ; ಯಾರೀತ ಮೈಸೂರು ಮೂಲದ ಮನೋರಂಜನ್?
ಬಂಧನಕ್ಕೊಳಗಾದವರು ಉತ್ತರ ಭಾರತ ಮೂಲದ ಸಾಗರ್ ಶರ್ಮಾ ಮತ್ತು ಮೈಸೂರಿನ ಮನೋರಂಜನ್ ಡಿ ಎಂದು ಗುರುತಿಸಲಾಗಿದೆ.ಸಂಸತ್ತಿನ ಆವರಣದ ಹೊರಗೆ ಘೋಷಣೆಗಳನ್ನು ಕೂಗಿ ಕಲರ್ ಸ್ಪ್ರೇ ಹಾರಿಸಿದವರು ಅನ್ಮೋಲ್ ಮತ್ತು ನೀಲಂ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಸಂಚಿನಲ್ಲಿ ಭಾಗಿಯಾಗಿದ್ದು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ದೆಹಲಿಯ ಹೊರಗಿನಿಂದ ಆಗಮಿಸಿದ ಎಲ್ಲಾ ಐವರು ಗುರುಗ್ರಾಮ್ನಲ್ಲಿ ಲಲಿತ್ ಝಾ ಎಂಬವನ ನಿವಾಸದಲ್ಲಿ ಒಟ್ಟಿಗೆ ತಂಗಿದ್ದರು ಎಂದು ಮೂಲಗಳು ತಿಳಿಸಿವೆ. ಆರನೇ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ನಿಖರವಾಗಿ ಯೋಜಿಸಿಯೇ ಕೃತ್ಯ ಎಸಗಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಎಲ್ಲರಿಗೂ ಪರಸ್ಪರ ಪರಿಚಯವಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು ಮತ್ತು ಯೋಜನೆಯನ್ನು ರೂಪಿಸಿದ್ದರು ಎಂದು ಮೂಲಗಳು ತಿಳಿಸಿವೆ.
“ನಾವಾಗಿಯೇ ಸಂಸತ್ತನ್ನು ತಲುಪಿದ್ದು, ನಮಗೆ ಯಾವುದೇ ಸಂಘಟನೆಯೊಂದಿಗೆ ಒಡನಾಟವಿಲ್ಲ ಎಂದು ಅವರು ಹೇಳಿರುವುದಾಗಿ, ವಿಚಾರಣೆಗಾಗಿ ವಿಶೇಷ ತಂಡವನ್ನು ರಚಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್