ನಾಳೆಯಿಂದ ಸಂಸತ್ ಅಧಿವೇಶನ
ಪೌರತ್ವ ಮಸೂದೆ ಅಸ್ತು ನಿರೀಕ್ಷೆ ಸರ್ವ ಪಕ್ಷ ಸಭೆ ನಡೆಸಿದ ಸ್ಪೀಕರ್
Team Udayavani, Nov 18, 2019, 6:15 AM IST
ಹೊಸದಿಲ್ಲಿ: ಸೋಮವಾರದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮುಸ್ಲಿಮೇತರ ವಲಸಿಗರಿಗೆ ಭಾರತೀಯ ನಾಗರಿಕತ್ವವನ್ನು ಒದಗಿಸುವಂಥ ವಿವಾದಾತ್ಮಕ ಪೌರತ್ವ (ತಿದ್ದು ಪಡಿ) ಮಸೂದೆಯನ್ನು ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ, ಅಂಗೀಕಾರ ಪಡೆಯಲು ಕೇಂದ್ರ ಸರಕಾರ ಉದ್ದೇಶಿಸಿದೆ.
ಚಳಿಗಾಲದ ಅಧಿವೇಶನವು ನ. 18ರಿಂದ ಡಿ.13ರ ವರೆಗೆ ನಡೆಯಲಿದೆ. ಮಸೂದೆಯನ್ನು ಅಧಿವೇಶನದ ಅಜೆಂಡಾವಾಗಿ ಸರಕಾರ ಪಟ್ಟಿ ಮಾಡಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರಕಾರವು ಹಿಂದಿನ ಅವಧಿಯಲ್ಲೇ ಈ ಮಸೂದೆಗೆ ಅಂಗೀಕಾರ ಪಡೆಯಲು ಪ್ರಯತ್ನಿಸಿತ್ತಾದರೂ ವಿಪಕ್ಷಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಅದು ವಿಫಲವಾಗಿತ್ತು. ಈ ಮಸೂದೆಯು ಧಾರ್ಮಿಕ ತಾರತಮ್ಯದಿಂದ ಕೂಡಿದೆ ಎಂದು ಆರೋಪಿಸಿದ್ದ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.
ಸುಗಮ ಕಲಾಪಕ್ಕೆ ಕೋರಿಕೆ
ಚಳಿಗಾಲದ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ಶನಿವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಸುಗಮ ಕಲಾಪಕ್ಕೆ ಎಲ್ಲ ಪಕ್ಷಗಳೂ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ. ಎಲ್ಲ ಪಕ್ಷಗಳೂ ಸಾರ್ವ ಜನಿಕರ ಹಿತಾಸಕ್ತಿಯಿರುವ ವಿಚಾರಗಳ ಕುರಿತು ಚರ್ಚೆ ನಡೆಸಲಿ ಎಂದು ಸಲಹೆ ನೀಡಿದ್ದಾರೆ. ಸಭೆಯಲ್ಲಿ ಮೋದಿ ಅವರೂ ಭಾಗಿಯಾಗಿದ್ದರು.
ಏನಿದೆ ಮಸೂದೆಯಲ್ಲಿ ?
ಈ ಮಸೂದೆಯ ಪ್ರಕಾರ ಧಾರ್ಮಿಕ ಕಿರುಕುಳ ತಾಳಲಾರದೇ ಬಾಂಗ್ಲಾದೇಶ, ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದಿರುವಂಥ ಮುಸ್ಲಿಮೇತರರಿಗೆ ಅಂದರೆ, ಹಿಂದೂಗಳು, ಜೈನರು, ಕ್ರೈಸ್ತರು, ಸಿಕ್ಖರು, ಬೌದ್ಧ ಧರ್ಮೀಯರು ಮತ್ತು ಪಾರ್ಸಿಗಳಿಗೆ ಭಾರತದ ಪೌರತ್ವವನ್ನು ಒದಗಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ