ಚಿಕಿತ್ಸೆಗಾಗಿ ಪರ್ರಿಕರ್ ಮುಂಬಯಿಗೆ; ಅಗತ್ಯಬಿದ್ದರೆ ವಿದೇಶಕ್ಕೆ
Team Udayavani, Mar 6, 2018, 8:15 AM IST
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಸೋಮವಾರ ಆರೋಗ್ಯ ತಪಾಸಣೆಗಾಗಿ ಮುಂಬಯಿಗೆ ತೆರಳಿದ್ದಾರೆ. ಅಗತ್ಯಬಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಪ್ರಯಾಣಿಸುವ ಸಾಧ್ಯತೆಯೂ ಇದೆ ಎಂದು ಅವರ ಕಚೇರಿ ತಿಳಿಸಿದೆ. ಮುಂಬಯಿಗೆ ತೆರಳುವುದಕ್ಕೂ ಮೊದಲು ಅವರು ತಮ್ಮ ಖಾಸಗಿ ನಿವಾಸದಲ್ಲಿ ಸಂಪುಟದ ಹಿರಿಯ ಸಚಿವರ ಸಭೆ ಕರೆದು, ತಮ್ಮ ಅನುಪಸ್ಥಿತಿಯಲ್ಲಿ ಕೈಗೊಳ್ಳಬೇಕಿರುವ ಕೆಲಸಗಳ ಕುರಿತು ವಿವರಿಸಿದ್ದಾರೆ. ಜತೆಗೆ, ಸಂಪುಟ ಸಲಹಾ ಸಮಿತಿಯೊಂದನ್ನು ರಚಿಸಿದ್ದಾರೆ ಎನ್ನಲಾಗಿದೆ.
ಪಾರೀಕರ್ ಫೆ.15ರಂದು ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಫೆ. 25ರಂದು ನಿರ್ಜಲೀಕರಣದಿಂದ ಬಳಲಿ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ