ವಿಭಜನೆ ಸ್ಮರಣಾ ದಿನ: ಟಾಕ್‌ವಾರ್‌ : ನೆಹರೂ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್‌ ಆರೋಪ


Team Udayavani, Aug 15, 2022, 6:50 AM IST

ವಿಭಜನೆ ಸ್ಮರಣಾ ದಿನ: ಟಾಕ್‌ವಾರ್‌ : ನೆಹರೂ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್‌ ಆರೋಪ

ಹೊಸದಿಲ್ಲಿ: ಭಾರತ-ಪಾಕಿಸ್ಥಾನ ವಿಭಜನೆ­ ನೆನಪಿಗೆ ಈ ವರ್ಷದಿಂದ ಆಚರಿಸ­ಲಾಗುತ್ತಿರುವ “ವಿಭಜನೆ ಸ್ಮರಣಾ ದಿನ’ವಾದ ರವಿವಾರ, ಬಿಜೆಪಿ, ಕಾಂಗ್ರೆಸ್‌ ನಡುವೆ ವಾಕ್ಸಮರ ನಡೆದಿದೆ.

ದೇಶ ವಿಭಜನೆಗೆ ಜವಾಹರ್‌ಲಾಲ್‌ ನೆಹರೂ ಕಾರಣ ಎಂದು ಬಿಜೆಪಿ ಆರೋಪಿಸಿದೆ. ಅದಕ್ಕೆ ಪೂರಕವೆಂಬಂತೆ ನೆಹರೂ ಮಾಡಿದ್ದ ಭಾಷಣದ ವೀಡಿಯೋವನ್ನು ಟ್ವೀಟ್‌ ಮಾಡಿದೆ.

ಮೊಹಮ್ಮದ್‌ ಅಲಿ ಜಿನ್ನಾ ನೇತೃತ್ವದ ಮುಸ್ಲಿಂ ಲೀಗ್‌ನ ಒತ್ತಡದಿಂದಾಗಿ ನೆಹರೂ, ಪಾಕಿಸ್ಥಾನ ರಚನೆಗೆ ಒಪ್ಪಿದ್ದರು ಎಂದು ಟ್ವೀಟ್‌ನಲ್ಲಿ ಆರೋಪಿಸಲಾಗಿದೆ. 1947­ರಲ್ಲಿ ಉಂಟಾಗಿದ್ದ ಬೆಳವಣಿಗೆಗಳ ಬಗ್ಗೆ ಹಿಂದಿಯಲ್ಲಿ ಹಿನ್ನೆಲೆ ಧ್ವನಿ ಹೊಂದಿರುವ ವೀಡಿಯೋವನ್ನು ಬಿಜೆಪಿ ಅಪ್‌ಲೋಡ್‌ ಮಾಡಿದೆ.

ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್‌ ಅದಕ್ಕೆ ತಿರುಗೇಟು ನೀಡಿ ಟ್ವೀಟ್‌ ಮಾಡಿದ್ದಾರೆ. “ಇತಿಹಾಸದ ಅತ್ಯಂತ ನೋವಿನ ಕ್ಷಣಗಳನ್ನು ಮತ್ತೆ ನೆನಪಿಸುವ ಮೂಲಕ ಸದ್ಯದ ರಾಜಕೀಯ ವಿಚಾರಗಳಿಗೆ ಆಹಾರವನ್ನಾಗಿ ಪರಿವರ್ತಿಸುವುದು ಪ್ರಧಾನಿಯವರ ಉದ್ದೇಶ. ಆಧುನಿಕ ಸಾವರ್ಕರರು ಮತ್ತು ಜಿನ್ನಾಗಳು ದೇಶವನ್ನು ಒಡೆಯುವ ಪ್ರಯತ್ನ ಮುಂದುವರಿಸಿ­ದ್ದಾರೆ. ವಿಭಜನೆ ಸಮಯದಲ್ಲಿ ಲಕ್ಷಾಂತರ ಜನರು ಜೀವ ಕಳೆದುಕೊಂಡರು ಮತ್ತು ದಿಕ್ಕಾ ಪಾಲಾದರು. ದೇಶ ವಿಭಜನೆ ಯೋಜನೆ ಸಾವರ್ಕರ್‌ ಅವರದ್ದೇ ಆಗಿತ್ತು. ಆ ಯೋಜನೆಗೆ ಜಿನ್ಹಾ ರೂಪು ಕೊಟ್ಟರಷ್ಟೇ’ ಎಂದು ದೂರಿದ್ದಾರೆ.

ಮೋದಿ, ಅಮಿತ್‌ ಶಾ ಗೌರವ: ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ವಿಭಜನೆ ವೇಳೆ ಹೋರಾಡಿದ ವೀರರನ್ನು ಸ್ಮರಿಸಿದ್ದಾರೆ. “ವಿಭಜನೆ ಸಮಯದಲ್ಲಿ ಪ್ರಾಣ ಬಲಿಕೊಟ್ಟ ವೀರರಿಗೆ ಗೌರವ ಸಮರ್ಪಿಸುತ್ತೇನೆ. ಹಾಗೆಯೇ ಆ ಕರಾಳ ಸಮಯ ದಲ್ಲಿಯೂ ಹೋರಾ­ಡಿ­­ದವರನ್ನು ನಾನು ಶ್ಲಾಘಿಸು ತ್ತೇನೆ’ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಟ್ವೀಟ್‌ ಮಾಡಿದ್ದು, “1947ರ ವಿಭಜನೆಯು ಇತಿಹಾಸದಲ್ಲಿಯೇ ಮರೆಯಲಾಗ­ದ ಅಮಾನ ವೀಯ ಅಧ್ಯಾಯ. ಹಿಂಸೆ, ದ್ವೇಷವು ಲಕ್ಷಾಂತರ ಜನರ ಜೀವನವನ್ನು ಕಿತ್ತುಕೊಂಡಿತು ಮತ್ತು ಅವರನ್ನು ದಿಕ್ಕಾಪಾಲಾಗಿಸಿತು. ಈ ಘಟನೆಯು ದೇಶದ ಯುವ ಸಮಾಜಕ್ಕೆ ಶಾಂತಿಯಿಂದ ಇರಲು ಸ್ಫೂರ್ತಿ ತುಂಬುತ್ತದೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.