ರೈಲಿನಲ್ಲಿ ನೀಡಿದ್ದ ಪಕೋಡದಲ್ಲಿ ಕೀಟ ಪತ್ತೆ
Team Udayavani, Aug 6, 2017, 7:50 AM IST
ಹೊಸದಿಲ್ಲಿ: ರೈಲುಗಳಲ್ಲಿ ಪ್ರಯಾಣಿಕರಿಗೆ ನೀಡುವ ಆಹಾರ ಸೇವನೆಗೆ ಯೋಗ್ಯವಿರುವುದಿಲ್ಲ ಎಂದು ಮಹಾಲೇಖಪಾಲರು ವರದಿ ನೀಡಿದ ಕೆಲವೇ ದಿನಗಳಲ್ಲಿ ರೈಲಿನಲ್ಲಿ ನೀಡಿದ ಆಹಾರದಲ್ಲಿ ಹಲ್ಲಿ ಪತ್ತೆಯಾಗಿತ್ತು. ಈಗ ಬಿಹಾರ ಸಂಪರ್ಕ ಕ್ರಾಂತಿ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಲಾಗಿದ್ದ ಪಕೋಡದಲ್ಲಿ ಕೀಟವೊಂದು ಪತ್ತೆಯಾಗಿದೆ.
ಆ.2ರಂದು ರೈಲಿನಲ್ಲಿ ದರ್ಭಾಂಗದಿಂದ ದಿಲ್ಲಿಗೆ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಆಜಾದ್ ಆಲಿ ಎಂಬವರು ರೈಲಿನಲ್ಲಿ ಪಕೋಡ ಕೊಂಡರು. ಅದನ್ನು ಅವರ ಮಗನಿಗೆ ತಿನ್ನಿಸುವ ವೇಳೆ ದೊಡ್ಡ ಕೀಟವೊಂದು ಅವರ ಕಣ್ಣಿಗೆ ಬಿದ್ದಿದೆ. “ನಾವು ಅಡುಗೆ ಕೋಣೆಯ ವ್ಯವಸ್ಥಾಪಕರಿಗೆ ಈ ಕುರಿತು ದೂರು ನೀಡಿದೆವು. ಅದಕ್ಕೆ ಅವರು ಕ್ಷಮೆ ಕೇಳಿದರು. ನಮ್ಮ ಸಹ ಪ್ರಯಾಣಿಕರೊಬ್ಬರು ಟ್ವಿಟರ್ ಮೂಲಕ ನೇರವಾಗಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರಿಗೆ ದೂರು ನೀಡಿದರು. ದೂರಿಗೆ ಕೂಡಲೇ ಸ್ಪಂದಿಸಿದ ಅವರು, ಈ ಕುರಿತು ತತ್ಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ವೈದ್ಯರು ನಾವಿದ್ದ ಲ್ಲಿಗೇ ಬಂದು ಮಗನ ತಪಾಸಣೆ ನಡೆಸಿದರು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ