ಮೇ 12ರಿಂದ ದೇಶಾದ್ಯಂತ ಪ್ರಯಾಣಿಕ ರೈಲು ಸೇವೆ ಆಂಶಿಕ ಪುನರಾರಂಭ ; ಮಾಸ್ಕ್ ಕಡ್ಡಾಯ


Team Udayavani, May 10, 2020, 9:50 PM IST

ಮೇ 12ರಿಂದ ದೇಶಾದ್ಯಂತ ಪ್ರಯಾಣಿಕ ರೈಲು ಸೇವೆ ಆಂಶಿಕ ಪುನರಾರಂಭ ; ಮಾಸ್ಕ್ ಕಡ್ಡಾಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್ 19 ವೈರಸ್ ಸಂಬಂಧಿತ ಲಾಕ್ ಡೌನ್ ನಿಂದಾಗಿ ದೇಶಾದ್ಯಂತ ಸ್ಥಗಿತಗೊಂಡಿದ್ದ ಪ್ರಯಾಣಿಕ ರೈಲು ಸೇವೆ ಸರಿ ಸುಮಾರು ಎರಡು ತಿಂಗಳುಗಳ ಬಳಿಕ ಪುನರಾಂಭಗೊಳ್ಳಲಿದೆ.

ಈ ಕುರಿತಾಗಿ ಇಂದು ಪ್ರಕಟನೆಯನ್ನು ಹೊರಡಿಸಿರುವ ರೈಲ್ವೇ ಇಲಾಖೆಯು ನಾಳೆಯಿಂದಲೇ ಮುಂಗಡ ಪ್ರಯಾಣದ ಬುಕ್ಕಿಂಗ್ ಪ್ರಾರಂಭವಾಗಲಿದೆ ಎಂದು ತಿಳಿಸಿದೆ. ಮತ್ತು ಮೇ 12ರ ಮಂಗಳವಾರದಿಂದ 15 ಜೊತೆ (30 ಟ್ರಿಪ್) ಪ್ರಯಾಣಿಕ ರೈಲು ಸೇವೆಗಳು ಪುನರಾಂಭಗೊಳ್ಳಲಿವೆ.

ಪ್ರಯಾಣಿಕ ರೈಲು ಸೇವೆಗಳ ಪುನರಾರಂಭದ ಪ್ರಾರಂಭಿಕ ಹಂತವಾಗಿ ನವದೆಹಲಿ ರೈಲ್ವೇ ನಿಲ್ದಾಣದಿಂದ ದಿಭ್ರುಗಢ, ಅಗರ್ತಲಾ, ಹೌರಾ, ಪಟ್ನಾ, ಬಿಲಾಸ್ ಪುರ, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮು ತಾವಿ ರೈಲ್ವೇ ನಿಲ್ದಾಣಗಳನ್ನು ಸಂಪರ್ಕಿಸುವ ಪ್ರಯಾಣಿಕರ ರೈಲುಗಳು ಓಡಾಟ ನಡೆಸಲಿವೆ.

ಈ ಮಾರ್ಗಗಳಲ್ಲಿ ಪ್ರಯಾಣಿಸುವ ರೈಲುಗಳ ಟಿಕೆಟ್ ಗಳ ಮುಂಗಡ ಬುಕ್ಕಿಂಗ್ ಮೇ 11 ಸೋಮವಾರ ಸಾಯಂಕಾಲ 4 ಗಂಟೆಯಿಂದ ಪ್ರಾರಂಭವಾಗಲಿದೆ. ಮತ್ತಿದು IRCTCಯ ವೆಬ್ ಸೈಟ್ ನಲ್ಲಿ ಮಾತ್ರವೇ ಲಭ್ಯವಾಗಲಿದೆ. ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಕಾರಣಕ್ಕೂ ಟಿಕೆಟ್ ಗಳನ್ನು ನೀಡಲಾಗುವುದಿಲ್ಲ ಮತ್ತು ಅಲ್ಲಿನ ಟಿಕೆಟ್ ಕೌಂಟರ್ ಗಳು ಮುಚ್ಚಿರುತ್ತವೆ ಎಂದು ರೈಲ್ವೇ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಹಾಗಾಗಿ ಸದ್ಯಕ್ಕೆ, ಆನ್ ಲೈನ್ ನಲ್ಲಿ ಮುಂಗಡ ಕಾಯ್ದಿರಿಸಿದ ಟಿಕೆಟ್ ಗಳನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರವೇ ರೈಲ್ವೇ ನಿಲ್ದಾಣಕ್ಕೆ ಪ್ರವೇಶಿಸಲು ಅವಕಾಶವನ್ನು ನೀಡಲಾಗುವುದು ಮತ್ತು ಮಂಗಳವಾರದಿಂದ ಪ್ರಾರಂಭಗೊಳ್ಳುವ ರೈಲುಗಳಲ್ಲಿ ಎಲ್ಲಾ ಬೋಗಿಗಳು ಹವಾನಿಯಂತ್ರಿತ ಬೋಗಿಗಳಾಗಿರುತ್ತವೆ ಮತ್ತು ಇವುಗಳ ದರವು ರಾಜಧಾನಿ ಎಸಿ ಕ್ಲಾಸ್ ದರಕ್ಕೆ ಸಮನಾಗಿರುತ್ತದೆ.

ರೈಲಿಗೆ ಹತ್ತುವ ಮೊದಲು ಎಲ್ಲಾ ಪ್ರಯಾಣಿಕರನ್ನು ನಿಲ್ದಾಣಗಳಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು ಹಾಗೂ ಸೋಂಕು ಲಕ್ಷಣ ರಹಿತ ಪ್ರಯಾಣಿಕರಿಗೆ ಮಾತ್ರವೇ ರೈಲು ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಹಾಗೂ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

ಇದೀಗ ಸರಿ ಸುಮಾರು 20 ಸಾವಿರ ರೈಲ್ವೇ ಬೋಗಿಗಳನ್ನು ಕೋವಿಡ್ 19 ಐಸೊಲೇಷನ್ ವಾರ್ಡ್ ಗಳಾಗಿ ಮಾರ್ಪಡಿಸಲಾಗಿರುವುದರಿಂದ ಲಭ್ಯ ಬೋಗಿಗಳ ಸಂಖ್ಯೆಗಳನ್ನು ಪರಿಗಣಿಸಿ ಮುಂಬರುವ ದಿನಗಳಲ್ಲಿ ರೈಲ್ವೇ ಇಲಾಖೆಯು ಹೊಸ ಮಾರ್ಗಗಳಲ್ಲಿ ವಿಶೇಷ ಸೇವೆಗಳನ್ನು ಪ್ರಾರಂಭಿಸಲಿದೆ ಎಂದು ತಿಳಿದುಬಂದಿದೆ.

ಮಾತ್ರವಲ್ಲದೇ, ವಿವಿಧ ರಾಜ್ಯಗಳ ಬೇಡಿಕೆಯ ಮೇರೆಗೆ ಲಾಕ್ ಡೌನ್ ಗೆ ಸಿಲುಕಿಕೊಂಡಿರುವ ತನ್ನ ಜನರನ್ನು ಅವರವರ ಊರಿಗೆ ಮರಳಿ ಕಳುಹಿಸಲು ಸದ್ಯಕ್ಕೆ ಸುಮಾರು 300 ರೈಲುಗಳು ಪ್ರತೀದಿನ ‘ಶ್ರಮಿಕ ವಿಶೇಷ’ ರೈಲು ಸೇವೆಗಳ ಓಡಾಟದಲ್ಲಿ ನಿರತವಾಗಿವೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.