ಕೋವಿಡ್ ಸೋಂಕಿಗೆ ಪತಂಜಲಿ ಆಯುರ್ವೇದಿಕ್ ಔಷಧಿ ಬಿಡುಗಡೆ ಮಾಡಿದ ಬಾಬಾ ರಾಮದೇವ್
Team Udayavani, Jun 23, 2020, 1:19 PM IST
ಹರಿದ್ವಾರ: ದೇಶಾದ್ಯಂತ ಕಾಡುತ್ತಿರುವ ಕೋವಿಡ್-19 ಸೋಂಕಿಗೆ ಪತಂಜಲಿ ಸಂಸ್ಥೆ ಆಯುರ್ವೇದಿಕ್ ಔಷಧಿಯನ್ನು ಬಿಡುಗಡೆ ಮಾಡಿದೆ. ಕೊರೊನಿಲ್ ಎಂಬ ಔಷಧಿಯನ್ನು ಪತಂಜಲಿ ಸಂಸ್ಥೆ ಬಿಡುಗಡೆ ಮಾಡಿದ್ದು, ಇದು ಸೋಂಕಿನ ವಿರುದ್ಧ ಶತಪ್ರತಿಶತ ಕೆಲಸ ಮಾಡಲಿದೆ ಎಂದಿದೆ.
ಪತಂಜಲಿ ಸಂಸ್ಥೆಯ ಪ್ರಧಾನ ಕಚೇರಿ ಉತ್ತರಾಖಂಡ್ ನ ಹರಿದ್ವಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಯೋಗ ಗುರು ಬಾಬಾ ರಾಮ್ ದೇವ್, ಕೊರೊನಿಲ್ ಔಷಧಿಯನ್ನು ಬಿಡುಗಡೆ ಮಾಡಿದರು.
ಪತಂಜಲಿ ಸಂಶೋಧನ ಕೇಂದ್ರ ಮತ್ತು ಜೈಪುರದ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಜಂಟಿಯಾಗಿ ಈ ಬಗ್ಗೆ ಸಂಶೋಧನೆ ನಡೆಸಲಾಗಿದೆ. ಪತಂಜಲಿಯ ದಿವ್ಯಾ ಫಾರ್ಮಸಿಯಲ್ಲಿ ಈ ಔಷಧಿಗಳನ್ನು ಉತ್ಪಾದಿಸಲಾಗುತ್ತಿದೆ ಎಂದು ಪತಂಜಲಿ ಹೇಳಿಕೊಂಡಿದೆ.
ಕೋವಿಡ್ 19 ಸೋಂಕಿಗೆ ಯಾರಾದರೂ ಔಷಧಿ ಹುಡುಕಲಿ ಎಂದು ಇಡೀ ವಿಶ್ವ ಎದುರು ನೋಡುತ್ತಿದೆ. ಇಂದು ನಾವು ಕೋವಿಡ್ ಸೋಂಕಿಗೆ ವಿಶ್ವದ ಮೊದಲ ಆಯುರ್ವೇದಿಕ್ ಔಷಧಿಯನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ರಾಮ್ ದೇವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!