ಹೈವೋಲ್ಟೇಜ್ ಡ್ರಾಮಾ: ವಿಮಾನದಲ್ಲೇ ಕಾಂಗ್ರೆಸ್‌ ನಾಯಕ ಖೇರಾ ಬಂಧನ… ಕಾಂಗ್ರೆಸ್‌ ಪ್ರತಿಭಟನೆ


Team Udayavani, Feb 24, 2023, 7:22 AM IST

ಹೈವೋಲ್ಟೇಜ್ ಡ್ರಾಮಾ: ವಿಮಾನದಲ್ಲೇ ಕಾಂಗ್ರೆಸ್‌ ನಾಯಕ ಖೇರಾ ಬಂಧನ… ಕಾಂಗ್ರೆಸ್‌ ಪ್ರತಿಭಟನೆ

ಹೊಸದಿಲ್ಲಿ: ಅವಹೇಳನಕಾರಿ ಹೇಳಿಕೆ ನೀಡಿರುವ ಆರೋ­ಪದಲ್ಲಿ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಅವರನ್ನು ಗುರುವಾರ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಈ ದಿಢೀರ್‌ ಬೆಳ­ವಣಿಗೆಯಿಂದಾಗಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಹೈವೋಲ್ಟೆàಜ್‌ ಡ್ರಾಮಾ ನಡೆದಿದ್ದು, ವಿಮಾನ ಸಂಚಾರವೂ 2 ಗಂಟೆ ವಿಳಂಬ­ವಾಯಿತು.
ಇನ್ನೊಂದೆಡೆ, ಪವನ್‌ ಖೇರಾ ಅವರಿಗೆ ನಿರೀಕ್ಷಣ ಜಾಮೀನು ಮಂಜೂರು ಮಾಡಿರುವ ಸುಪ್ರೀಂ, ಫೆ.28ರ ವರೆಗೆ ಅವರಿಗೆ ಬಂಧನದಿಂದ ರಕ್ಷಣೆ ಒದಗಿಸಿದೆ. ಘಟನೆ ಬೆನ್ನಲ್ಲೇ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ ನಡೆದಿದ್ದು, ಪ್ರತಿಭಟನೆಗಳೂ ನಡೆದಿವೆ.

ಆಗಿದ್ದೇನು?: ಇತ್ತೀಚೆಗೆ ಅದಾನಿ ಗ್ರೂಪ್‌ ವಿರುದ್ಧದ ಹಿಂಡನ್‌ಬರ್ಗ್‌ ವರದಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಅವರು, ಪ್ರಧಾನಿ ಮೋದಿಯವರನ್ನು “ನರೇಂದ್ರ ಗೌತಮ್‌ದಾಸ್‌ ಮೋದಿ, ಅಲ್ಲಲ್ಲ ನರೇಂದ್ರ ದಾಮೋದರ್‌ದಾಸ್‌ ಮೋದಿ’ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಖೇರಾ ವಿರುದ್ಧ ದೇಶದ ಮೂಲೆ ಮೂಲೆಗಳಲ್ಲೂ ಕೇಸು ದಾಖಲಾಗಿತ್ತು. ಅಸ್ಸಾಂನಲ್ಲಿ ದಾಖಲಾಗಿದ್ದ ಎಫ್ಐಆರ್‌ಗೆ ಅನುಗುಣವಾಗಿ ಖೇರಾರನ್ನು ಬಂಧಿಸಲು ನೆರವಾಗುವಂತೆ ಅಸ್ಸಾಂ ಪೊಲೀ­ಸರು ದಿಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು.

ವಿಮಾನದಿಂದ ಕೆಳಗಿಳಿಸಿದರು!: ರಾಯು³ರದಲ್ಲಿ ಶುಕ್ರವಾರ ಆರಂಭವಾಗಲಿರುವ ಕಾಂಗ್ರೆಸ್‌ ಸಮಾವೇಶದಲ್ಲಿ ಪಾಲ್ಗೊಳ್ಳಲೆಂದು ಖೇರಾ ಸಹಿತ ಕಾಂಗ್ರೆಸ್‌ನ ಹಲವು ನಾಯಕರು ದಿಲ್ಲಿಯಲ್ಲಿ ಇಂಡಿಗೋ ವಿಮಾನ ಹತ್ತಿದ್ದರು. ಈ ವೇಳೆ ಖೇರಾ ಅವರ ಬಳಿ ಬಂದ ಸಿಬಂದಿ, “ನಿಮ್ಮ ಬ್ಯಾಗ್‌ಗೆ ತಪ್ಪು ಟ್ಯಾಗ್‌ ಹಾಕಿದ್ದೀರಿ. ನಮ್ಮೊಂದಿಗೆ ಬನ್ನಿ’ ಎಂದು ಹೇಳಿ ವಿಮಾನದಿಂದ ಕೆಳಗಿಳಿಸಿದರು. ಅಲ್ಲಿ ಕಾಯುತ್ತಿದ್ದ ಪೊಲೀಸರು ಖೇರಾರನ್ನು ವಶಕ್ಕೆ ಪಡೆದರು. ಈ ವೇಳೆ ಆಕ್ರೋಶಗೊಂಡ ರಣದೀಪ್‌ ಸುಜೇìವಾಲ, ಕೆ.ಸಿ.ವೇಣುಗೋಪಾಲ್‌ ಸಹಿತ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್‌ ನಾಯಕರು ಕೂಡ, “ಅರೆಸ್ಟ್‌ ವಾರಂಟ್‌ ಇಲ್ಲದೇ ನೀವು ಬಂಧಿಸು­ವಂತಿಲ್ಲ’ ಎಂದು ವಾದಿಸಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.

ಟಾರ್ಮ್ಯಾಕ್ ನಲ್ಲೇ ಧರಣಿ
ವಿಮಾನದ ಹೊರಗೆ ಟಾರ್ಮ್ಯಾಕ್ ನಲ್ಲೇ ಕುಳಿತು ಧರಣಿ ಆರಂಭಿಸಿದ ಕಾಂಗ್ರೆಸ್‌ ನಾಯಕರು, ಖೇರಾ ಅವರನ್ನು ಬಿಡದೇ ವಿಮಾನ ಹಾರಲು ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದರು. ಜತೆಗೆ “ಜಬ್‌ ಜಬ್‌ ಮೋದಿ ಡರ್ತಾ ಹೈ, ಪೊಲೀಸ್‌ ಕೆ ಪೀಛೆ ಚುಪ್ತಾ ಹೆ’ (ಯಾವಾಗ ಮೋದಿ ಹೆದರುತ್ತಾರೋ, ಪೊಲೀಸರ ಹಿಂದೆ ಅಡಗುತ್ತಾರೆ) ಎಂದು ಘೋಷಣೆಗಳನ್ನು ಕೂಗತೊಡಗಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಇಂಡಿಗೋ ಸಿಬಂದಿ, ಕೂಡಲೇ ಎಲ್ಲ ಪ್ರಯಾಣಿಕರನ್ನೂ ಕೆಳಗಿಳಿಸಿ ಬೇರೆ ವಿಮಾನದಲ್ಲಿ ಕಳುಹಿಸುವ ವ್ಯವಸ್ಥೆ ಮಾಡಿದರು.

ಕಾಂಗ್ರೆಸ್‌ -ಬಿಜೆಪಿ ವಾಕ್‌ವಾರ್‌
ಖೇರಾ ಬಂಧನ ವಿಚಾರವು ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕೇಂದ್ರ ಸರಕಾರವು ಭಾರತದ ಪ್ರಜಾಸತ್ತೆಯನ್ನು “ಹಿಟ್ಲರ್‌ಶಾಹಿ’ ಮತ್ತು “ಸರ್ವಾಧಿಕಾರ’ವಾಗಿ ಬದಲಾಯಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, “ವಿಪಕ್ಷಗಳ ನಾಯಕರು ತಾವು ಕಾನೂನಿಗಿಂತಲೂ ಮೇಲು ಎಂಬ ತಪ್ಪುಕಲ್ಪನೆಯಲ್ಲಿ ಬದುಕಬಾರದು’ ಎಂದು ಹೇಳಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, “ಸಂಸತ್‌ನಲ್ಲಿ ಧ್ವನಿಯೆತ್ತಿದರೆ ವಿಪಕ್ಷಗಳಿಗೆ ನೋಟಿಸ್‌ ನೀಡಲಾಗುತ್ತದೆ. ಸಮಾವೇಶ ನಡೆಯುವಾಗಲೇ ಛತ್ತೀಸ್‌ಗಢದಲ್ಲಿ ನಮ್ಮ ನಾಯಕರ ಮೇಲೆ ಇಡಿ ದಾಳಿ ನಡೆಯುತ್ತದೆ. ನಮ್ಮ ವಕ್ತಾರ ಖೇರಾರನ್ನು ಒತ್ತಾಯವಾಗಿ ವಿಮಾನದಿಂದ ಇಳಿಸಿ ಬಂಧಿಸಲಾಗಿದೆ. ಈ ಸರ್ವಾಧಿಕಾರ ವನ್ನು ನಾವು ಖಂಡಿಸುತ್ತೇವೆ’ ಎಂದಿದ್ದಾರೆ. ಬಿಜೆಪಿ ವಕ್ತಾರ ಗೌರವ್‌ ಭಾಟಿಯಾ, “ಎಲ್ಲವನ್ನೂ ಕಾನೂನುಪ್ರಕಾರವೇ ಮಾಡಲಾಗಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.