ಜಮ್ಮು-ಕಾಶ್ಮೀರ ಭೂಮಿ ಖರೀದಿ ಕಾನೂನು: ಪಿಡಿಪಿ ಪ್ರತಿಭಟನೆ, ಹಲವರ ಬಂಧನ
ಜಮ್ಮು-ಕಾಶ್ಮೀರ ಪೊಲೀಸರು ವಿಫಲಗೊಳಿಸಿದ್ದು, ಹಲವಾರು ಪಿಡಿಪಿ ಮುಖಂಡರು, ಕಾರ್ಯಕರ್ತರನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ
Team Udayavani, Oct 29, 2020, 6:33 PM IST
ಶ್ರೀನಗರ್:ಕಾಶ್ಮೀರದಲ್ಲಿ ವಾಸವಿಲ್ಲದವರೂ ಅಲ್ಲಿನ ಜಮೀನು ಖರೀದಿಸಬಹುದು ಎಂದು ಕೇಂದ್ರ ಸರ್ಕಾರ ಮಹತ್ವದ ಕಾನೂನು ಜಾರಿಗೆ ತಂದಿದ್ದನ್ನು ವಿರೋಧಿಸಿ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಗುರುವಾರ(ಅಕ್ಟೋಬರ್ 29, 2020) ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ವರದಿಯ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ ಹೊರಗಿನವರು ಭೂಮಿ ಖರೀದಿಸಬಹುದು ಎಂದು ಕಾನೂನಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಪಿಡಿಪಿ ಬೃಹತ್ ಪ್ರತಿಭಟನೆ ನಡೆಸಿತ್ತು. ಏತನ್ಮಧ್ಯೆ ಪಿಡಿಪಿ ಪ್ರತಿಭಟನಾ ಮೆರವಣಿಗೆಯನ್ನು ಜಮ್ಮು-ಕಾಶ್ಮೀರ ಪೊಲೀಸರು ವಿಫಲಗೊಳಿಸಿದ್ದು, ಹಲವಾರು ಪಿಡಿಪಿ ಮುಖಂಡರು, ಕಾರ್ಯಕರ್ತರನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.
ಪಿಡಿಪಿ ಕೇಂದ್ರ ಕಚೇರಿಗೆ ಪಿಡಿಪಿ ಮುಖಂಡರು, ಕಾರ್ಯಕರ್ತರು ತಲುಪಿದ ಕೂಡಲೇ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪಕ್ಷದ ಕಚೇರಿಗೆ ಒಳಬರುವ ಮತ್ತು ಹೊರ ಹೋಗುವ ರಸ್ತೆಗಳನ್ನು ಬಂದ್ ಮಾಡಿರುವುದಾಗಿ ವರದಿ ತಿಳಿಸಿದೆ.
ಪಿಡಿಪಿ ಮಾಜಿ ಎಂಎಲ್ ಸಿ ಆಲಾಂ, ಪಿಡಿಪಿ ಯುವ ನಾಯಕ ವಾಹೀದ್ ಪರ್ರಾ, ಮಾಧ್ಯಮ ಸಲಹೆಗಾರ ಸುಹೈಲ್ ಬುಖಾರಿ, ರೌಫ್ ಬಟ್, ಮೋಹಿತ್ ಭಾನ್ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ