ಪುಲ್ವಾಮಾ ಅನಂತರ ಗಡಿಯಲ್ಲಿ ಶಾಂತಿ


Team Udayavani, May 12, 2019, 6:00 AM IST

35

ಹೊಸದಿಲ್ಲಿ: ಪುಲ್ವಾಮಾ ದಾಳಿಯ ಅನಂತರ ಭಾರತದ ಪ್ರತಿದಾಳಿ ಹಾಗೂ ರಾಜತಾಂತ್ರಿಕ ಒತ್ತಡದಿಂದಾಗಿ ಪಾಕಿಸ್ಥಾನ ಪಾಠ ಕಲಿತಿದೆ. ಗಡಿಯಲ್ಲಿ ನಿಯೋಜಿಸಿದ್ದ ಹೆಚ್ಚುವರಿ ಸೇನೆಯನ್ನು ಹಿಂಪಡೆಯಲು ಪಾಕಿಸ್ಥಾನ ಸಮ್ಮತಿಸಿದೆ. ಪಾಕ್‌ ಸೇನೆಯೊಂದಿಗೆ ಭಾರತೀಯ ಸೇನೆ ನಡೆಸಿದ ಮಾತುಕತೆಯಿಂದ ಇದು ಸಾಧ್ಯವಾಗಿದೆ ಎಂದು ರಕ್ಷಣಾ ವಿಭಾಗದ ಉನ್ನತ ಅಧಿಕಾರಿ ಮಾಹಿತಿ ನೀಡಿದ್ದಾರೆ. ಉಭಯ ದೇಶಗಳ ಡಿಜಿಎಂಇ ಮಟ್ಟದ ಅಧಿಕಾರಿಗಳ ಮಾತುಕತೆ ವೇಳೆ ಸ್ಪೆಷಲ್‌ ಸರ್ವೀಸ್‌ ಗ್ರೂಪ್‌ ಹಿಂಪಡೆಯಲು ಪಾಕಿಸ್ತಾನ ಸಮ್ಮತಿಸಿದೆ. ಪಡೆಯನ್ನು ಪುಲ್ವಾಮಾ ದಾಳಿಯ ನಂತರ ಪಾಕ್‌ ನಿಯೋಜಿಸಿತ್ತು. ಈ ಬಗ್ಗೆ ಪ್ರಧಾನಿ ಸಚಿವಾಲಯಕ್ಕೆ ಸೇನೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಭಾರತವು ಪಾಕಿಸ್ಥಾನಕ್ಕೆ ಸೇನೆಯ ಮೂಲಕ ಒತ್ತಡ ಹಾಕಿದ್ದಷ್ಟೇ ಅಲ್ಲ, ರಾಜತಾಂತ್ರಿಕವಾಗಿಯೂ ಒತ್ತಡ ಹಾಕಿದೆ. ಜೈಶ್‌ ಉಗ್ರ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಲ್ಲಿ ಅಮೆರಿಕ, ಇಂಗ್ಲೆಂಡ್‌ ಹಾಗೂ ಫ್ರಾನ್ಸ್‌ ದೇಶಗಳು ಭಾರತದ ಬೆಂಬಲಕ್ಕೆ ನಿಂತಿರುವುದು ಹಾಗೂ ಹಣಕಾಸು ದುರ್ಬಳಕೆ ಮೇಲೆ ವಿಚಕ್ಷಣೆ ಹೊಂದಿರುವ ಎಫ್ಎಟಿಎಫ್ ಮೇಲೆ ಭಾರತ ಒತ್ತಡ ಹಾಕಿರುವುದೂ ಪಾಕಿಸ್ಥಾನಕ್ಕೆ ದುಃಸ್ವಪ್ನವಾಗಿ ಕಾಡಿದೆ.

ಒಳನುಸುಳುವಿಕೆ ಇಲ್ಲ: ಪುಲ್ವಾಮಾಗೆ ಪ್ರತಿ ದಾಳಿ ನಡೆಸಿದ ನಂತರದಲ್ಲಿ ಯಾವುದೇ ಒಳನುಸುಳುವಿಕೆ ಪ್ರಯತ್ನಗಳು ಪಾಕ್‌ ಕಡೆಯಿಂದ ನಡೆದಿಲ್ಲ. ಗಡಿಯಾಚೆಯಿಂದ ಯಾವುದೇ ದಾಳಿ ನಡೆಸುವ ಪ್ರಯತ್ನಗಳೂ ನಡೆದಿಲ್ಲ.

ಉಗ್ರ ನೆಲೆ ಬಂದ್‌: ಗಡಿ ನುಸುಳಿ ಭಾರತಕ್ಕೆ ಬರಲು ಉಗ್ರರು ಬಳಸುತ್ತಿದ್ದ ಉಗ್ರ ನೆಲೆಗಳು ಈಗ ಖಾಲಿಯಾಗಿವೆ. ಎಲ್‌ಒಸಿ ಬಳಿ ಇದ್ದಂತಹ ಉಗ್ರ ನೆಲೆಗಳು ತಾತ್ಕಾಲಿಕವಾಗಿ ಮುಚ್ಚಿವೆ. ಇದಕ್ಕೆ ಪಾಕ್‌ ಮೇಲೆ ಭಾರತದ ಒತ್ತಡವೇ ಕಾರಣ ಎಂದು ವರದಿ ಹೇಳಿದೆ. ಪೂಂಛ… ಹಾಗೂ ರಜೌರಿ ವಲಯದಲ್ಲೂ ಉಗ್ರರ ಸಂಖ್ಯೆ ಕಡಿಮೆಯಾಗಿದೆ. ಇದು ಪಾಕಿಸ್ಥಾನವು ಪಾಠ ಕಲಿಯುತ್ತಿದೆ ಎಂಬುದನ್ನು ಸೂಚಿಸುವ ಸಂಕೇತಗಳು. ಇತ್ತೀಚೆಗಷ್ಟೇ ಮಳೆಗಾಲ ಆರಂಭಕ್ಕೂ ಮುನ್ನ ಸಾಮಾನ್ಯವಾಗಿ ಮಾಡಲಾಗುವಂತೆ ಬಂಕರ್‌ಗಳನ್ನು ರಿಪೇರಿ ಮಾಡುವಾಗ ಪಾಕಿಸ್ಥಾನ ಯಾವ ಆಕ್ಷೇಪವನ್ನೂ ಎತ್ತಿಲ್ಲ. ಅಷ್ಟೇ ಅಲ್ಲ, ಪುಲ್ವಾಮಾಗೆ ಪ್ರತಿ ದಾಳಿ ನಡೆಸಿದ ನಂತರ ಪಾಕಿಸ್ಥಾನ ಗಡಿಯಲ್ಲಿ ನಡೆಸುವ ಗುಂಡಿನ ದಾಳಿಯ ಪ್ರಮಾಣವೂ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.