ಭಾರತದೊಂದಿಗೆ ಶಾಂತಿ, ಸಹಬಾಳ್ವೆ ದೂರದ ಮಾತು: ಪಾಕ್ ದೈನಿಕ
Team Udayavani, Aug 15, 2017, 3:29 PM IST
ಇಸ್ಲಾಮಾಬಾದ್ : ಭಾರತದೊಂದಿಗೆ ಶಾಂತಿ ಮತ್ತು ಸಹಬಾಳ್ವೆ ಬಹು ದೂರದ ಮಾತು ಎಂದು ಪಾಕ್ ದೈನಿಕ “ದಿ ಡೇಲಿ ಟೈಮ್ಸ್’ ಹೇಳಿದೆ.
ಸ್ವಾತಂತ್ರ್ಯ ದೊರಕಿ ಏಳು ದಶಕಗಳು ಕಳೆದಿವೆಯಾದರೂ ಭಾರತ ಮತ್ತು ಪಾಕಿಸ್ಥಾನ ಇನ್ನೂ ಶಾಂತಿಯುತ ಸಹಬಾಳ್ವೆಯನ್ನು ಕಲಿತಿಲ್ಲ ಎಂದು ಡೇಲಿ ಟೈಮ್ಸ್ ಸಂಪಾದಕೀಯ ಬರಹದಲ್ಲಿ ಹೇಳಿದೆ.
“ನಿಜಕ್ಕಾದರೆ ಭಾರತ ಮತ್ತು ಪಾಕಿಸ್ಥಾನದ ದ್ವಿಪಕ್ಷೀಯ ಬಾಂಧವ್ಯ ಕಾಲ ಸಂದಂತೆ ಹದಗೆಡುತ್ತಾ ಬಂದಿದೆ; ಅಂತೆಯೇ ಪರಸ್ಪರರಿಗೆ ಹಾನಿಯುಂಟು ಮಾಡುವ ಉಭಯತರ ಸಾಮರ್ಥ್ಯ ಇಷ್ಟು ವರ್ಷಗಳಲ್ಲಿ ಹೆಚ್ಚುತ್ತಾ ಬಂದಿದೆ’ ಎಂದು ದೈನಿಕ ಹೇಳಿದೆ.
ಎರಡೂ ದೇಶಗಳು ಪರಸ್ಪರರ ವಿರುದ್ಧ ಅತ್ಯಂತ ವಿಷಕಾರಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮನ್ನು ತಾವು ವ್ಯಾಖ್ಯಾನಿಸಿಕೊಂಡಿವೆ; ಎರಡೂ ದೇಶಗಳು ಪರಸ್ಪರರ ವಿರುದ್ಧ ಪ್ರತ್ಛನ್ನ ಸಮರದಲ್ಲಿ ನಿರತವಾಗಿವೆ ಎಂದು ಪತ್ರಿಕೆ ಹೇಳಿದೆ.
ಹೊಸದಿಲ್ಲಿಯಲ್ಲಿ ಈಗಿರುವ ಆಡಳಿತೆಯು ಪಾಕಿಸ್ಥಾನದ ಅತ್ಯಂತ ಕೆಟ್ಟ ಶಕ್ತಿಗಳ ತದ್ರೂಪಿ ಇಮೇಜ್ ಹೊಂದುವುದಕ್ಕೆ ಕಟಿಬದ್ಧವಾಗಿದೆ ಎಂದು ಪತ್ರಿಕೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು