ಪೆಗಾಸಸ್ ಬೇಹುಗಾರಿಕೆ ಪ್ರಕರಣ; ಸುಪ್ರೀಂನಲ್ಲಿ ಉಲ್ಟಾ ಹೊಡೆದ ಕೇಂದ್ರ ಸರಕಾರ
ಅಫಿಡವಿಟ್ ಸಲ್ಲಿಕೆಯಿಂದ ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರಬಹುದು
Team Udayavani, Sep 14, 2021, 10:50 AM IST
ಹೊಸದಿಲ್ಲಿ: ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಉಲ್ಟಾ ಹೊಡೆದಿರುವ ಕೇಂದ್ರ ಸರಕಾರ, ವಿಸ್ತೃತ ಅಫಿಡವಿಟ್ ಸಲ್ಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಸೋಮವಾರ ಹೇಳಿದೆ.
ಇಸ್ರೇಲ್ನ ಬೇಹುಗಾರಿಕ ಸಂಸ್ಥೆಯನ್ನು ಬಳಸಿ ಕೊಂಡು ತಮ್ಮ ಮೇಲೆ ಕಣ್ಗಾವಲು ಮಾಡಲಾಗಿದ್ದು, ಈ ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿ ಗಳ ವಿಚಾರಣೆ ವೇಳೆ ಸರಕಾರ ಈ ಹೇಳಿಕೆ ನೀಡಿದೆ. “ಅಫಿಡವಿಟ್ ಸಲ್ಲಿಕೆಯಿಂದ ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರಬಹುದು. ನಾವು ಯಾವ ಸಾಫ್ಟ್ ವೇರ್ ಬಳಸುತ್ತಿದ್ದೇವೆ ಎನ್ನುವುದು ಭಯೋತ್ಪಾದಕರಿಗೆ ತಿಳಿಯಬಾರದು. ಹಾಗಾಗಿ ಅಫಿಡವಿಟ್ ಸಲ್ಲಿಸುವುದಿಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.
ಇದರಿಂದ ಕುಪಿತಗೊಂಡ ಸಿಜೆಐ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, “ಕಳೆದ ವಿಚಾರಣೆ ವೇಳೆಯೇ ಅಫಿಡವಿಟ್ ಸಲ್ಲಿಸುವಂತೆ ಹೇಳಿದ್ದೆವು. ಅದಕ್ಕೆ ಕಾಲಾ ವಕಾಶವನ್ನೂ ನೀಡಿದ್ದೆವು. ಈಗ ನೀವು ಆಗಲ್ಲ ಎನ್ನುತ್ತಿದ್ದೀರಿ. ನಾವು ರಾಷ್ಟ್ರೀಯ ಭದ್ರತೆಗೆ ಸಂಬಂಧಿ ಸಿದ ಮಾಹಿತಿ ಕೇಳುತ್ತಿಲ್ಲ. ನಾಗರಿಕರು ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂದು ಆರೋ ಪಿಸಿ ನಮ್ಮ ಮುಂದೆ ಬಂದಿದ್ದಾರೆ. ಅದಕ್ಕೆ ನಮಗೆ ಉತ್ತರ ಬೇಕು. ಇನ್ನು 2-3 ದಿನಗಳಲ್ಲಿ ನಾವು ಮಧ್ಯಾಂತರ ಆದೇಶ ಹೊರಡಿಸಲಿದ್ದೇವೆ’ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ