ಪೆಗಾಸಸ್ : ತನಿಖೆ ನಡೆಸುವಂತೆ ಕೋರಿ ‘ಸುಪ್ರೀಂ’ಗೆ ಅರ್ಜಿ ಸಲ್ಲಿಕೆ
ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್
Team Udayavani, Jul 25, 2021, 2:36 PM IST
ನವ ದೆಹಲಿ : ಪೆಗಾಸಸ್ ಬಳಸಿ ದೇಶದ ಪ್ರಮುಖ ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬೇಹುಗಾರಿಕೆ ನಡೆಸಿವ ಎಂಬ ವರದಿಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಅರ್ಜಿ ದೇಶದ ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದೆ.
ಪೆಗಾಸಸ್ ತಂತ್ರಾಂಶವನ್ನು ಬಳಸಿ ದೇಶದ ಪ್ರಮುಖ ಪತ್ರಕರ್ತರು, ರಾಜಕೀಯ ಮುಖಂಡರು, ಸರ್ಕಾರಿ ಸಿಬ್ಬಂದಿಗಳನ್ನು ಒಳಗೊಂಡು ಅಂದಾಜು 300 ಭಾರತೀಯರ ಮೇಲೆ ನಿಗಾ ಇರಿಸಲಾಗಿದೆ ಎನ್ನುವುದಾಗಿ ಆದ ವರದಿಗಳ ಮೇಲೆ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರು ಹೇಳಿದ್ದಾರೆ.
ಇದನ್ನೂ ಓದಿ : ಓ್ಹ… ಭ್ರಮೆ : ನಿಮಗೆ ಗೊತ್ತಿಲ್ಲದೆ ನೀವು ಒಂದು ಭ್ರಮೆಯಲ್ಲಿದ್ದೀರಿ..!
ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಬ್ರಿಟಾಸ್, ಭಾರತೀಯರಲ್ಲಿ ಇದು ಭಾರಿ ಆತಂಕವನ್ನು ಸೃಷ್ಟಿ ಮಾಡಿದೆ. ಸಂವಿಧಾನಕ್ಕೆ ವಿರುದ್ಧವಾಗಿದೆ. ದೇಶದ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧವಾಗಿ ಇದು ನಡೆಯುತ್ತಿದೆ. ವಾಕ್ ಸ್ವಾತಂತ್ರಕ್ಕೆ ಹರಣ ಮಾಡುತ್ತದೆ. ಈ ಕುರಿತಾಗಿ ಶೀಗ್ರದಲ್ಲಿ ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಇದೊಂದು ಗಂಭಿರ ವಿಚಾರ, ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆ ನಡೆಸಬೇಕಾಗುವ ವಿಚಾರದಲ್ಲಿ ಮೌನ ತಾಳಿದೆ. ಪ್ರಜಾಪ್ರಭುತ್ವದ ವಿರುದ್ಧವಾಗಿ ನಡೆಯುತ್ತಿರುವ ಪಿತೂರಿ ಎಂದು ಕೇಂದ್ರ ಹೇಳಿದೆಯಾದರೂ, ಯಾವ ಬಗ್ಗೆ ತನಿಖೆಗೆ ಸರ್ಕಾರ ಸೂಚಿಸಲಿಲ್ಲ. ಮುಂಗಾರು ಅಧಿವೇಶನದಲ್ಲಿಯೂ ಈ ಬಗ್ಗೆ ಪ್ರಸ್ತಾಪ ಆಯಿತು. ಕೇಂದ್ರ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಡುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಭ್ರಷ್ಟರನ್ನು ತೆಗೆಯುವ ವಿಧಾನ ಪ್ರಧಾನಿ ಮೋದಿ ,ಅಮಿತ್ ಶಾಗೆ ಗೊತ್ತಿದೆ – ವೀರಪ್ಪ ಮೊಯ್ಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ