ರಫೇಲ್‌: ಮೋದಿಗೆ ಪವಾರ್‌ ಬೆಂಬಲ


Team Udayavani, Sep 28, 2018, 8:20 AM IST

sharad-pawar-600.jpg

ಹೊಸದಿಲ್ಲಿ: ರಫೇಲ್‌ ಯುದ್ಧ ವಿಮಾನ ಖರೀದಿ ಸಂಬಂಧ ವಾಗ್ವಾದ ಮುಂದುವರಿದಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಂಬಲಕ್ಕೆ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ನಿಲ್ಲುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮೋದಿ ಉದ್ದೇಶದ ಬಗ್ಗೆ ಜನರಲ್ಲಿ ಅನುಮಾನಗಳಿಲ್ಲ. ವಿವರಗಳನ್ನು ಬಹಿರಂಗಗೊಳಿಸುವಂತೆ ವಿಪಕ್ಷಗಳು ಕೇಳುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಪವಾರ್‌ ಹೇಳಿದ್ದಾರೆ. ಆದರೆ ಒಪ್ಪಂದದ ಮೊತ್ತವನ್ನು ಬಹಿರಂಗಗೊಳಿಸುವುದರಲ್ಲಿ ಯಾವ ಅಪಾಯವೂ ಇಲ್ಲ ಎಂದೂ ಅವರು ಹೇಳಿದ್ದಾರೆ.

ಆಕ್ಷೇಪಿಸಿದ್ದ ರಕ್ಷಣಾ ಅಧಿಕಾರಿ: ರಫೇಲ್‌ ಒಪ್ಪಂದಕ್ಕೆ ಭಾರತ-ಫ್ರಾನ್ಸ್‌ ಸಹಿಗೂ ಮುನ್ನವೇ ರಕ್ಷಣಾ ಇಲಾಖೆಯ ಖರೀದಿ ಪ್ರಕ್ರಿಯೆಯಲ್ಲಿ ಜಂಟಿ ಕಾರ್ಯದರ್ಶಿ ಮಟ್ಟದ ಅಧಿಕಾರಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ. ಯುಪಿಎ ಕಾಲದ ರದ್ದುಗೊಳಿಸಿದ ಒಪ್ಪಂದಕ್ಕಿಂತ ವಿಮಾನಗಳ ಮೂಲ ಬೆಲೆಯನ್ನು ಈ ಒಪ್ಪಂದದಲ್ಲಿ ಹೆಚ್ಚಿಸಿದ್ದ ಬಗ್ಗೆ ಅಧಿಕಾರಿಯು ಆಕ್ಷೇಪ ಎತ್ತಿದ್ದರು. ಇದರಿಂದಾಗಿ ಒಪ್ಪಂದವನ್ನು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವುದಕ್ಕೂ ವಿಳಂಬವಾಗಿತ್ತು. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಒಪ್ಪಂದದ ಬಗ್ಗೆ ಸಂಸತ್ತಿಗೆ ಸಿಎಜಿ ವರದಿ ಮಾಡಲಿದೆ ಎನ್ನಲಾಗಿದೆ.

ಹೆಚ್ಚು ಸಮಯ ಕೇಳಿದ್ದರಿಂದ ರದ್ದು: ರಫೇಲ್‌ ಯುದ್ಧ ವಿಮಾನಗಳನ್ನು ನಿರ್ಮಿಸಲು 2.57 ಪಟ್ಟು ಹೆಚ್ಚು ಸಮಯವನ್ನು ಎಚ್‌ಎಎಲ್‌ ಕೇಳಿದ್ದರಿಂದಾಗಿ ಒಪ್ಪಂದದಲ್ಲಿ ಎಚ್‌ಎಎಲ್‌ ಅನ್ನು ಕೈಬಿಡಬೇಕಾಯಿತು ಎಂದು ಸಚಿವ ಬಾಬುಲ್‌ ಸುಪ್ರಿಯೋ ಹೇಳಿದ್ದಾರೆ. 100 ತಾಸು ಬೇಕು ಎಂದು ಡಸ್ಸಾಲ್ಟ್ ಹೇಳಿದರೆ, ಎಚ್‌ಎಎಲ್‌ 257 ಗಂಟೆ ಬೇಕು ಎಂದಿತ್ತು ಎಂದಿದ್ದಾರೆ.

ಅಧಿಕಾರಿಗಳ ಟಾರ್ಗೆಟ್‌: ರಫೇಲ್‌ ಯುದ್ಧ ವಿಮಾನಗಳ ಒಪ್ಪಂದದ ಬಗ್ಗೆ ಆಕ್ಷೇಪವೆತ್ತಿದ ಅಧಿಕಾರಿಗಳನ್ನು ಮೋದಿ ಸರಕಾರ ಟಾರ್ಗೆಟ್‌ ಮಾಡಿದೆ ಎಂದು ರಾಹುಲ್‌ ಆರೋಪಿಸಿದ್ದಾರೆ. ಆಕ್ಷೇಪ ವ್ಯಕ್ತಪಡಿಸಿದ ಅಧಿಕಾರಿಗೆ ಶಿಕ್ಷೆ ನೀಡಿದ್ದರೆ, ಸರಕಾರದ ನೀತಿ ಹೊಗಳಿದವರಿಗೆ ಬಡ್ತಿ ನೀಡಲಾಗಿದೆ ಎಂದಿದ್ದಾರೆ. ಏತನ್ಮಧ್ಯೆ, ಪ್ರಧಾನಿ ಮೋದಿ ಅವಹೇಳನ ಖಂಡಿಸಿ ಕಾಂಗ್ರೆಸ್‌ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ಧ ತಮಿಳುನಾಡಿನಲ್ಲಿಯೂ ಬಿಜೆಪಿ ಕೇಸು ದಾಖಲಿಸಿದೆ.

ರಾಜನಾಥ್‌ ವ್ಯಂಗ್ಯ
ರಫೇಲ್‌ ವಿಚಾರದಲ್ಲಿ ಜನರನ್ನು ತಪ್ಪುದಾರಿಗೆಳೆಯುತ್ತಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾ’ಫೇಲ್‌’ ಆಗಲಿದ್ದಾರೆ ಎಂದು ಗೃಹ ಸಚಿವ ರಾಜನಾಥ್‌ ಸಿಂಗ್‌ ವ್ಯಂಗ್ಯವಾಡಿದ್ದಾರೆ. ಅಲ್ಲದೆ ಇತ್ತೀಚೆಗೆ ಪ್ರಧಾನಿಯನ್ನು ಚೋರ್‌ (ಕಳ್ಳ) ಎಂದಿದ್ದಕ್ಕೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ರಾಜನಾಥ್‌, ಆರೋಪ ಮಾಡುವಾಗ ಆಕ್ಷೇಪಾರ್ಹ ಪದ ಬಳಸದಂತೆಯೂ ಸಲಹೆ ನೀಡಿದ್ದಾರೆ. ರಾಹುಲ್‌ಗೆ ರಫೇಲ್‌ ಒಪ್ಪಂದದ ಬಗ್ಗೆ ತಿಳಿದಿದೆ. ಆದರೂ ಜನರನ್ನು ಅವರು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.