ಉಗ್ರ ಸಂಘಟನೆ ಸೇರುವ ಪ್ರಮಾಣದಲ್ಲಿ ಇಳಿಕೆ
Team Udayavani, Feb 21, 2020, 9:49 PM IST
ಶ್ರೀನಗರ: ಭಯೋತ್ಪಾದನೆ ಪೀಡಿತ ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಯುವಕರು ಉಗ್ರ ಸಂಘಟನೆಗಳಿಗೆ ಸೇರುವ ಪ್ರಮಾಣ ತೀವ್ರವಾಗಿ ಕಡಿಮೆಯಾಗಿದೆ. ಇದಕ್ಕೆ ಕಾರಣ ಸೇನೆಯ ಜನಸ್ನೇಹಿ “ಮಾ’ ಕಾರ್ಯಾಚರಣೆ ಎಂದು ಲೆಫ್ಟಿನೆಂಟ್ ಜನರಲ್ ಕನ್ವಲ್ಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ. ಈ ಕಾರ್ಯಾಚರಣೆ ನಡೆಸುವ ಸೇನಾತಂಡವನ್ನು ಧಿಲ್ಲೋನ್ ಮುನ್ನಡೆಸುತ್ತಿದ್ದಾರೆ.
ಎನ್ಕೌಂಟರ್ ವೇಳೆ ಸಿಕ್ಕಿಬೀಳುವ ಸ್ಥಳೀಯ ಉಗ್ರರನ್ನು, ಅವರ ತಾಯಂದಿರೊಂದಿಗೆ ಮುಖಾಮುಖೀ ಮಾಡಿಸುವುದು ಮಾ ಕಾರ್ಯಾಚರಣೆಯ ಉದ್ದೇಶ. ಅದು ಹಲವು ಯುವಕರನ್ನು ಸಹಜ ಜೀವನಕ್ಕೆ ಹಿಂತಿರುಗುವಂತೆ ಮಾಡಿದೆ.
ನಮ್ಮೆಲ್ಲ ಕಾರ್ಯಾಚರಣೆಗಳಲ್ಲಿ, ಸ್ಥಳೀಯ ಭಯೋತ್ಪಾದಕರನ್ನು ಮುಖ್ಯವಾಹಿನಿಗೆ ಹಿಂತಿರುಗಲು ಗರಿಷ್ಠ ಅವಕಾಶ ನೀಡಿದ್ದೇವೆ. ಕೆಲವೊಮ್ಮೆ ಅರ್ಧಕ್ಕೆ ಎನ್ಕೌಂಟರ್ ನಿಲ್ಲಿಸಿ, ಹಿರಿಯರನ್ನು ಭಯೋತ್ಪಾದನೆ ಜಾಲಕ್ಕೆ ಸಿಕ್ಕಿಬಿದ್ದ ಯುವಕರ ಮನವೊಲಿಸಲು ಬಳಸುತ್ತಿದ್ದೇವೆ. ಇದರಿಂದ ಸಾಕಷ್ಟು ಯಶಸ್ಸು ಸೇನೆಗೆ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.
ಜಮ್ಮುಕಾಶ್ಮೀರವು ಎರಡು ಕೇಂದ್ರಾಡಳಿತ ಪ್ರದೇಶಗಳಾದ ನಂತರ ಉಗ್ರ ಜಾಲ ಸೇರಿಕೊಳ್ಳುವವರ ಸಂಖ್ಯೆ ಬಹಳ ಕಡಿಮೆಯಾಗಿದೆ. ಸರಾಸರಿ ಐವರು ಮಾತ್ರ ಭಯೋತ್ಪಾದಕ ತಂಡ ಸೇರುತ್ತಿದ್ದಾರೆ. ಇದಕ್ಕೂ ಮುನ್ನ ತಿಂಗಳಿಗೆ 14 ಮಂದಿ ಸೇರುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ