ಉತ್ತಮ ಹೆದ್ದಾರಿ ಬೇಕಿದ್ದರೆ ಟೋಲ್ ಪಾವತಿ ಮಾಡಬೇಕು
ಎಕ್ಸ್ಪ್ರೆಸ್ ಹೆದ್ದಾರಿಗಳಲ್ಲಿ ಟೋಲ್ ದುಬಾರಿ ಬಗ್ಗೆ ಸಚಿವ ಗಡ್ಕರಿ ಮಾತು
Team Udayavani, Sep 16, 2021, 10:00 PM IST
ಬುಂದಿ (ರಾಜಸ್ಥಾನ):”ಜನರಿಗೆ ಉತ್ತಮ ಸೇವೆ ಬೇಕಾಗಿದ್ದರೆ ಅದಕ್ಕೆ ಶುಲ್ಕ ಪಾವತಿ ಮಾಡಬೇಕು’ ಹೀಗೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ದೆಹಲಿ-ಮುಂಬೈ ನಡುವಿನ ಎಕ್ಸ್ಪ್ರೆಸ್ ಹೆದ್ದಾರಿಯ ಕಾಮಗಾರಿಯನ್ನು ರಾಜಸ್ಥಾನದ ಬುಂದಿಯಲ್ಲಿ ಗುರುವಾರ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. ಹೆದ್ದಾರಿಗಳಲ್ಲಿ ಟೋಲ್ ಪಾವತಿ ಮಾಡುವುದರ ಬಗ್ಗೆ ವ್ಯಕ್ತವಾಗುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಸಚಿವ ಗಡ್ಕರಿ ಮಾತುಗಳು ಮಹತ್ವ ಪಡೆದಿವೆ.
“ನೀವು ಮದುವೆಯನ್ನು ಹವಾನಿಯಂತ್ರಿತ ಸಭಾಂಗಣದಲ್ಲಿಯೂ ಅಥವಾ ಬಯಲು ಪ್ರದೇಶದಲ್ಲಿಯೂ ನಡೆಸಬಹುದು. ಆದರೆ, ಹವಾನಿಯಂತ್ರಿತ ಸಭಾಂಗಣ ಬೇಕಾಗಿದ್ದರೆ, ಅದಕ್ಕೆ ಶುಲ್ಕ ಪಾವತಿ ಮಾಡಬೇಕು. ಅದೇ ರೀತಿ ಉತ್ತಮ ರೀತಿಯ ರಸ್ತೆಗಳಲ್ಲಿ ಪ್ರಯಾಣ ಮಾಡಬೇಕು ಎಂದಿದ್ದರೆ ಜನರು ಟೋಲ್ ಪಾವತಿ ಮಾಡಬೇಕಾಗುತ್ತದೆ’ ಎಂಬ ಸಮರ್ಥನೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ.
ಇದನ್ನೂ ಓದಿ:ವಿದ್ಯಾರ್ಥಿಗಳ ಬೇಡಿಕೆಗೆ ಸಿಎಂ ಸ್ಪಂದನೆ : ಮಕ್ಕಳ ಜೊತೆ ಬೊಮ್ಮಾಯಿ ಫೋಟೋ
ಗುಣಮಟ್ಟದ ಎಕ್ಸ್ಪ್ರೆಸ್ ಹೆದ್ದಾರಿಯಿಂದ ಪ್ರಯಾಣದ ಅವಧಿ ಕಡಿಮೆಯಾಗುತ್ತದೆ ಎಂದು ಹೇಳಿದ ಸಚಿವ ಗಡ್ಕರಿ, 1,380 ಕಿಮೀ ದೂರದ ಅಷ್ಟಪಥಗಳ ಕಾಮಗಾರಿ 2023ಕ್ಕೆ ಮುಕ್ತಾಯವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ