ಇಂದಿಗೂ ನಮ್ಮ ಸೇನೆಯ ಬಗ್ಗೆ ಜನರಿಗೆ ಅನುಮಾನ
Team Udayavani, Mar 3, 2019, 12:30 AM IST
ಹೊಸದಿಲ್ಲಿ: ಕೆಲವು ಪಕ್ಷಗಳು ಹಾಗೂ ಕೆಲವು ವ್ಯಕ್ತಿಗಳಿಗೆ ನಮ್ಮ ಸೇನೆಯ ಬಗ್ಗೆ ಅನುಮಾನಗಳಿರುವುದು ಅತ್ಯಂತ ದುರದೃಷ್ಟಕರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಯೋತ್ಪಾದನೆಯ ವಿರುದ್ಧ ಭಾರತ ಕ್ರಮ ಕೈಗೊಳ್ಳುತ್ತಿರುವ ಈ ಸಮಯದಲ್ಲಿ ಕೆಲವರು ಸೇನಾ ಬಲದ ಬಗ್ಗೆ ಪ್ರಶ್ನೆ ಎತ್ತುತ್ತಿದ್ದಾರೆ ಎಂದು ಅವರು ಶನಿವಾರ ಹೊಸದಿಲ್ಲಿಯಲ್ಲಿ ನಡೆದ ಇಂಡಿಯಾ ಟುಡೇ ಸಮ್ಮೇಳನದಲ್ಲಿ ಹೇಳಿದ್ದಾರೆ. ಈಗ ನಮ್ಮ ದೇಶದ ಪ್ರತಿ ಯೋಧನೂ ನಮಗೆ ಅತ್ಯಂತ ಪ್ರಮುಖ. ಈ ಹಿಂದೆ ಹಲವು ಯೋಧರು ಹುತಾತ್ಮರಾಗಿದ್ದರೂ, ಕ್ರಮ ತೆಗೆದುಕೊಂಡಿರಲಿಲ್ಲ. ಆದರೆ ಸನ್ನಿವೇಶ ಬದಲಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಭಾರತದಲ್ಲಿನ ಕೆಲವು ವ್ಯಕ್ತಿಗಳ ಕಾಮೆಂಟ್ ಮತ್ತು ಲೇಖನಗಳನ್ನು ಭಾರತದ ವಿರುದ್ಧ ಪಾಕಿಸ್ಥಾನದಲ್ಲಿ ಸಾಕ್ಷ್ಯವನ್ನಾಗಿ ಬಳಸಲಾಗುತ್ತದೆ. ಮೋದಿ ಬಗ್ಗೆ ಇವರ ವಿರೋಧವು ಭಾರತದ ವಿರೋಧವಾಗಿ ಪರಿವರ್ತನೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.
ಇಂದು ಮೋದಿ ಅಮೇಠಿಗೆ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಲೋಕಸಭಾ ಕ್ಷೇತ್ರವಾದ ಉತ್ತರಪ್ರದೇಶದ ಅಮೇಠಿಗೆ ಪ್ರಧಾನಿ ಮೋದಿ ಅವರು ಭಾನುವಾರ ಭೇಟಿ ನೀಡಲಿದ್ದಾರೆ. 2014ರ ಬಳಿಕ ಮೊದಲ ಬಾರಿಗೆ ಅವರು ಅಮೇಠಿಗೆ ತೆರಳಲಿದ್ದು, ಅಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಸಾರ್ವಜನಿಕ ಸಭೆಯನ್ನೂ ನಡೆಸಲಿದ್ದಾರೆ.
ಅಜ್ಮಿರ್ ದರ್ಗಾಗೆ ಚಾದರ್: ಇದೇ ವೇಳೆ, ರಾಜಸ್ಥಾನದ ಅಜ್ಮಿರ್ ಶರೀಫ್ ದರ್ಗಾದಲ್ಲಿ ಸದ್ಯದಲ್ಲೇ 807ನೇ ಉರೂಸ್ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ದರ್ಗಾಗೆ ಚಾದರ್ವೊಂದನ್ನು ಸಮರ್ಪಿಸಿದ್ದಾರೆ. ದರ್ಗಾ ಸಮಿತಿಯ ಪ್ರಮುಖರು ಶನಿವಾರ ಮೋದಿ ಅವರನ್ನು ಭೇಟಿಯಾದ ವೇಳೆ, ಚಾದರ್ ಅನ್ನು ಹಸ್ತಾಂತರಿಸಲಾಗಿದೆ. ಈ ಬಗ್ಗೆ ಪ್ರಧಾನಿಯೇ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್