ಜಗನ್ಮೋಹನ್ ರೆಡ್ಡಿ ಶಾಶ್ವತ ಅಧ್ಯಕ್ಷ: ಕಾನೂನು ಬಾಹಿರ ಎಂದ ಚುನಾವಣಾ ಆಯೋಗ
ಆಂಧ್ರಪ್ರದೇಶ ಸಿಎಂ ಕನಸು ಭಗ್ನ
Team Udayavani, Sep 21, 2022, 10:45 PM IST
ಹೈದರಾಬಾದ್: ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರನ್ನು ಪಕ್ಷದ ಶಾಶ್ವತ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡುವಂತೆ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ಅಲ್ಲದೇ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಆಯೋಗ, “ಯಾವುದೇ ರಾಜಕೀಯ ಪಕ್ಷವು ಒಬ್ಬ ವ್ಯಕ್ತಿಯನ್ನು ಯಾವುದೇ ಹುದ್ದೆಗೆ ಶಾಶ್ವತವಾಗಿ ನೇಮಿಸುವುದು ಕಾನೂನು ಬಾಹಿರವಾಗಿದೆ. ಇದನ್ನು ಸಹಿಸಲಾಗದು’ ಎಂದು ಹೇಳಿದೆ.
“ರಾಜಕೀಯ ಪಕ್ಷದ ಯಾವುದೇ ಹುದ್ದೆಗೆ ನಿಗದಿತ ಅವಧಿಯ ನಂತರವೂ ಚುನಾವಣೆ ಘೋಷಿಸದಿರುವುದು, ಚುನಾವಣೆ ನಡೆಸದಿರುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅಲ್ಲದೇ ಇದು ಕೇಂದ್ರ ಚುನಾವಣಾ ಆಯೋಗದ ನಿಯಮಗಳ ಸಂಪೂರ್ಣ ಉಲ್ಲಂಘನೆಯಾಗಿದೆ,’ ಎಂದೂ ಆಯೋಗದ ಪ್ರಕಟಣೆ ತಿಳಿಸಿದೆ.
ಮಾಧ್ಯಮಗಳ ವರದಿಗೆ ಸಂಬಂಧಿಸಿದಂತೆ ಆಂತರಿಕ ತನಿಖೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ