ಧಾರ್ಮಿಕ ಅಲ್ಪಸಂಖ್ಯಾಕರ ಮೇಲಿನ ನಿರಂತರ ದೌರ್ಜನ್ಯ : ಪಾಕ್ಗೆ ಛೀಮಾರಿ
Team Udayavani, Dec 16, 2019, 6:30 AM IST
ಹೊಸದಿಲ್ಲಿ: ಧಾರ್ಮಿಕ ಅಲ್ಪಸಂಖ್ಯಾಕರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿರುವ ಪಾಕಿ ಸ್ಥಾನಕ್ಕೆ ವಿಶ್ವಸಂಸ್ಥೆಯ ಆಯೋಗವೊಂದು ಛೀಮಾರಿ ಹಾಕಿದೆ. ಈ ಬೆಳವಣಿಗೆಯಿಂದಾಗಿ ಭಾರತದ ಪೌರತ್ವ ಕಾಯ್ದೆ ಕುರಿತು ಮೂಗು ತೂರಿಸಿ, ಅಲ್ಪ ಸಂಖ್ಯಾಕರ ದಮನಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದ ಇಮ್ರಾನ್ ಖಾನ್ಗೆ ತೀವ್ರ ಮುಖಭಂಗ ಉಂಟಾಗಿದೆ.
ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾಕ ರಾಗಿರುವ ಕ್ರಿಶ್ಚಿಯನ್ ಮತ್ತು ಹಿಂದೂ ಸಮುದಾಯಗಳಿಗೆ ತಾರತಮ್ಯ ಎಸಗಲಾಗುತ್ತಿದೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ದೌರ್ಜನ್ಯ ಹೆಚ್ಚುತ್ತಿದೆ ಎಂದು ಮಹಿಳೆಯರ ಸ್ಥಿತಿಗತಿ ಪರಿಶೀಲನೆ ನಡೆಸುವ ವಿಶ್ವ ಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಸಮಿತಿಗೆ ಸಂಬಂಧಿಸಿದ ಆಯೋಗ ಟೀಕಿಸಿದೆ.
ಒಟ್ಟು 47 ಪುಟಗಳಿರುವ ಈ ವರದಿಯಲ್ಲಿ ಪಾಕಿಸ್ಥಾನದ ತೆಹ್ರೀಕ್- ಇ- ಇನ್ಸಾಫ್ ಸರಕಾರವು ಜಾರಿ ಮಾಡಿರುವಂಥ ಕೆಲವು ಕಾನೂನುಗಳು, ತೀವ್ರಗಾಮಿ ಮನಃಸ್ಥಿತಿ ಇರುವವರಿಗೆ ಧಾರ್ಮಿಕ ಅಲ್ಪಸಂಖ್ಯಾಕರ ಮೇಲೆ ದಾಳಿ ನಡೆಸಲು ಅವಕಾಶ ನೀಡಿದೆ. ನಂಬಿಕೆಯ ನಿಂದನೆ ವಿಚಾರವನ್ನು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯಗೊಳಿಸಲಾಗುತ್ತಿದೆ. ಈ ಕಾನೂನು ಮೂಲಕ ಧಾರ್ಮಿಕ ಅಲ್ಪ ಸಂಖ್ಯಾಕರನ್ನು ಶಿಕ್ಷೆಗೆ ಗುರಿಪಡಿಸಲು ಬಳಸಲಾಗುತ್ತಿದೆ ಎಂದೂ ವರದಿಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮಹಿಳೆಯರನ್ನು ಅಪಹರಿಸಿ ಮತಾಂತರಗೊಳಿಸಿ ಮದುವೆ ಆಗುತ್ತಾರೆ. ಮತ್ತೆ ಅವರಿಗೆ ಕುಟುಂಬದ ಜತೆ ಸಂಪರ್ಕ ಬೆಳೆಸಲು ಅವಕಾಶ ನಿರಾಕರಿಸಲಾಗುತ್ತದೆ ಎಂದಿದೆ ವರದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು