18 ವರ್ಷ ಮೇಲ್ಪಟ್ಟವರು ಬೇಕಾದ ಧರ್ಮ ಆಯ್ಕೆ ಮಾಡಲು ಅರ್ಹರು : ಸುಪ್ರೀಂ ಕೋರ್ಟ್
Team Udayavani, Apr 9, 2021, 4:20 PM IST
ನವ ದೆಹಲಿ : 18 ವರ್ಷಕ್ಕಿಂತ ಮೇಲ್ಪಟ್ಟವರು ಯಾರಾದರೂ ತಮಗೆ ಹಿತವೆನ್ನಿಸುವ ಧರ್ಮವನ್ನು ಆರಿಸಲು ಮುಕ್ತರು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಧಾರ್ಮಿಕ ಮತಾಂತರವನ್ನು ತಡೆಯುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
ಓದಿ : ರಾಜ್ಯದಲ್ಲಿ ಹೆಲಿಟೂರಿಸಂ ಆರಂಭಿಸಲು ಶೀಘ್ರದಲ್ಲಿ ಮಹೂರ್ತ ನಿಗದಿ: ಸಿ.ಪಿ.ಯೋಗೇಶ್ವರ್
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಮ್ಮ ಧರ್ಮವನ್ನು ಆಯ್ಕೆ ಮಾಡಲು ಅನುಮತಿಸದೆ ಇರಲು ಯಾವುದೇ ಕಾರಣವಿಲ್ಲ. ನಾವು ಈ ಅರ್ಜಿಗೆ ಅನುಮತಿಯನ್ನು ಕೊಡಲು ಸಾಧ್ಯವಿಲ್ಲ. ಈ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯ ಮೂರ್ತಿಗಳಾದ ಆರ್ ಎಫ್ ನಾರಿಮನ್, ಬಿ.ಆರ್ ಗವಾಯಿ ಹಾಗೂ ಹೃಷಿಕೇಶ್ ರಾಯ್ ಇದ್ದ ತ್ರಿಸದಸ್ಯ ನ್ಯಾಯಪೀಠ ತಿಳಿಸಿದೆ.
ಇನ್ನು, ವಕೀಲ ಶಂಕರನಾರಾಯಣನ್ ತಮಗೆ ಅಪೀಲು ವಾಪಸ್ ಪಡೆಯಲು, ಸರ್ಕಾರ ಹಾಗೂ ಕಾನೂನು ಆಯೋಗಕ್ಕೆ ಮನವಿ ಸಲ್ಲಿಸಲು ಅನುಮತಿ ಕೋರಿದರು. ಆದರೇ, ಅವರ ಅನುಮತಿ ಕೋರಿಕೆಯನ್ನು ಕೂಡ ನ್ಯಾಯಪೀಠ ನಿರಾಕರಿಸಿದೆ.
ಇನ್ನು, ಕಲಂ 51ಎ ಅಡಿಯಲ್ಲಿ, ಮಾಟ ಮಂತ್ರ, ಮೂಡ ನಂಬಿಕೆ ಮತ್ತು ಮೋಸದ ಧಾರ್ಮಿಕ ಮತಾಂತರವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳು ವಿಫಲವಾಗಿವೆ ಎಂದು ವಕೀಲ ಅಶ್ವನಿ ಕುಮಾರ್ ದುಬೆ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿತ್ತು.
ಮತಾಂತರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೇಂದ್ರವು ಕನಿಷ್ಟ 3 ವರ್ಷಗಳ ಜೈಲು ಶಿಕ್ಷೆಯನ್ನು 10 ವರ್ಷಗಳವರೆಗೆ ವಿಸ್ತರಿಸಬೇಕು ಮತ್ತು ದಂಡ ವಿಧಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು.
ಓದಿ : 8 ನಗರಗಳಲ್ಲಿ ನೈಟ್ ಕರ್ಫ್ಯೂ: ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ