ಗಡ್ಕರಿ ಚುನಾವಣೆ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ
Team Udayavani, Jul 7, 2019, 3:18 PM IST
ನಾಗಪುರ: ನಾಗಪುರದಿಂದ ಲೋಕ ಸಭೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಚುನಾವ ಣೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವರು ಶುಕ್ರವಾರ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಗಡ್ಕರಿ ಅವರ ಚುನಾವಣ ಪ್ರಕ್ರಿಯೆಯಲ್ಲಿ ಅಕ್ರಮವಾಗಿದೆ ಎಂದು ಪಟೋಲೆ ಆರೋಪಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಗಡ್ಕರಿ ಅವರು ತಮ್ಮ ಪ್ರತಿಸ್ಪರ್ಧಿ ಪಟೋಲೆ ಅವರನ್ನು 1.97 ಲಕ್ಷ ಮತಗಳಿಂದ ಸೋಲಿಸಿದ್ದರು. ಗಡ್ಕರಿ ಅವರ ಚುನಾವಣೆಯನ್ನು ಪ್ರಶ್ನಿಸಿ ಶುಕ್ರವಾರ ಹೈಕೋರ್ಟ್ನ ನಾಗಪುರ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಪಟೋಲೆ ಅವರ ಪರ ವಕೀಲ ವೈಭವ್ ಜಗ್ತಾಪ್ ಹೇಳಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪಟೋಲೆ ಅವರು, ಕಾನೂನಿನ ಪ್ರಕಾರ ರೂಪಿಸಲಾಗಿರುವ ಕಾರ್ಯವಿಧಾನಗಳನ್ನು ಚುನಾವಣ ಅಧಿಕಾರಿಗಳು ಅನುಸರಿಸಿಲ್ಲ ಎಂದು ಆರೋಪಿಸಿದ್ದಾರೆ.
ಈ ಅರ್ಜಿಯು ಭಾರತದ ಚುನಾವಣ ಆಯೋಗ, ಅದರ ಮುಖ್ಯ ಅಧಿಕಾರಿಗಳು ಮತ್ತು ನಿತಿನ್ ಗಡ್ಕರಿ ಅವರ ವಿರುದ್ಧವಾಗಿದೆ
ಎಂದು ಪಟೋಲೆ ಹೇಳಿದ್ದಾರೆ. ಚುನಾವಣೆಯ ಸಮಯದಲ್ಲಿ ಪಟೋಲೆ ಅವರು ಸ್ಟ್ರಾಂಗ್ ರೂಂಗಳಲ್ಲಿ ಇರಿಸಲಾಗಿದ್ದ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳ ಸುತ್ತಲಿನ ಭದ್ರತೆಯನ್ನು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು