ಮತ್ತೆ ಏರಿತು ತೈಲ ದರ!
Team Udayavani, May 15, 2018, 6:00 AM IST
ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ, 19 ದಿನಗಳಿಂದ ಸ್ಥಗಿತವಾಗಿದ್ದ ಪೆಟ್ರೋಲ್, ಡೀಸೆಲ್ ದರ ದಿಢೀರನೇ ಏರಿಕೆಯಾಗಿದೆ. ರವಿವಾರ ಮಧ್ಯರಾತ್ರಿಯಿಂದಲೇ ಜಾರಿವಾಗುವಂತೆ ಪೆಟ್ರೋಲ್ ದರ 17 ಪೈಸೆ, ಡೀಸೆಲ್ ದರ 21 ಪೈಸೆ ಏರಿಕೆಯಾಗಿದೆ.
ತೈಲ ಕಂಪನಿಗಳ ಈ ನಿರ್ಧಾರದಿಂದಾಗಿ ದೇಶಾದ್ಯಂತ ಪೆಟ್ರೋಲ್,ಡೀಸೆಲ್ ದರ ದಾಖಲೆ ಮಟ್ಟದಲ್ಲಿ ಏರಿಕೆಯಾದಂತಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಸರಕಾರಿ ಸ್ವಾಮ್ಯದ ತೈಲ ಕಂಪನಿ ಗಳು ಕಳೆದ 3 ವಾರಗಳಿಂದ, ಅಂದರೆ ಏ.24 ರಿಂದ ತೈಲ ದರದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ದರ ಹೆಚ್ಚಾಗುತ್ತಲೇ ಇದ್ದು, ತೈಲ ಕಂಪನಿಗಳಿಗೆ ಸುಮಾರು 500 ಕೋಟಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ರವಿವಾರ ಮಧ್ಯರಾತ್ರಿಯ ಬದಲಾವಣೆ ಯಂತೆ ಬೆಂಗಳೂರಿನಲ್ಲಿ ಡೀಸೆಲ್ ದರ 67.31 ರೂ. ಪೆಟ್ರೋಲ್ ದರ 76.04 ರೂ.ಗಳಾಗಿದೆ.
ಕಾಂಗ್ರೆಸ್ ಟೀಕೆ: ಚುನಾವಣೆ ಮುಗಿಯು ತ್ತಿದ್ದಂತೆ ತೈಲ ದರ ಏರಿಕೆ ಮಾಡಿರುವ ಕ್ರಮದ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣೆವರೆಗೂ ದರ ಪರಿಷ್ಕರಣೆ ಮಾಡದ ಕೇಂದ್ರ ಸರಕಾರ ಇದೀಗ, ಮತ್ತೆ ದರ ಏರಿಕೆ ಮಾಡಿದೆ. ಕರ್ನಾಟಕ ಚುನಾವಣೆ ಗ್ರಾಹಕರಿಗೆ ಕೊಂಚ ಸಮಾಧಾನ ನೀಡಿತ್ತಷ್ಟೇ ಎಂದು ಕಾಂಗ್ರೆಸ್ ನಾಯಕ ಚಿದಂಬರಂ ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!