ಸತತ ಎರಡನೇ ದಿನ ಪೆಟ್ರೋಲ್-‌ ಡೀಸೆಲ್‌ ಬೆಲೆ ಏರಿಕೆ; ತಿಂಗಳಲ್ಲಿ 8 ಬಾರಿ ಬೆಲೆ ಬದಲಾವಣೆ


Team Udayavani, Jan 23, 2021, 4:30 PM IST

Petrol

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಂದು ಮತ್ತೆ ಹೆಚ್ಚಳವಾಗಿದೆ. ಸರಕಾರಿ ತೈಲ ಕಂಪೆನಿಗಳು ಸತತ ಎರಡನೇ ದಿನ ಜನವರಿ 23ರ ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿವೆ. ಇದರಿಂದಾಗಿ ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ 100 ರೂ. ನ ಸಮೀಪ ತಲುಪಿದಂತಾಗಿದೆ.

ರಾಜಸ್ಥಾನದ ಗಂಗಾ ನಗರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97.50 ರೂ. ನಷ್ಟಿದ್ದು, ಇದು ದೇಶದ ಅತೀ ದುಬಾರಿ ದರವಾಗಿದೆ. ಭೋಪಾಲ್‌ನಲ್ಲಿ 93.56 ರೂ., ಮುಂಬಯಿಯಲ್ಲಿ 92.28 ರೂ. ಇದೆ.

ದಿಲ್ಲಿಯಲ್ಲಿ ಡೀಸೆಲ್ ಬೆಲೆ 26 ಪೈಸೆ ಮತ್ತು ಪೆಟ್ರೋಲ್ ಬೆಲೆ ಲೀಟರ್‌ಗೆ 25 ಪೈಸೆ ಹೆಚ್ಚಾಗಿದೆ. ಇದರಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ 85.70 ರೂ. ಮತ್ತು ಡೀಸೆಲ್ 75.88 ರೂ. ನಷ್ಟಿದೆ. ಶುಕ್ರವಾರವಷ್ಟೇ ಡೀಸೆಲ್-ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಲಾಗಿತ್ತು.

ಜನವರಿ ತಿಂಗಳೊಂದರಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 8 ಬಾರಿ ಹೆಚ್ಚಾಗಿದೆ. ಅಂದರೆ ಪೆಟ್ರೋಲ್ ಪ್ರತೀ ಲೀಟರ್‌ಗೆ 1.99 ರೂ. ತುಟ್ಟಿಯಾದಂತಾಗಿದೆ. ಇನ್ನು ಡಿಸೇಲ್‌ ಈ ತಿಂಗಳಿನಲ್ಲಿ ಲೀಟರ್‌ಗೆ 2.01 ರೂ.ಗಳಷ್ಟು ದುಬಾರಿಯಾಗಿದೆ. ಡಿಸೆಂಬರ್ 7ರಂದು ದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ 83.71 ರೂ. ಮತ್ತು ಡೀಸೆಲ್ ಲೀಟರ್ 73.87 ರೂ.ಗೆ ಮಾರಾಟವಾಗಿತ್ತು. ಅನಂತರ ಅವುಗಳ ಬೆಲೆಯನ್ನು 29 ದಿನಗಳ ವರೆಗೆ ಹೆಚ್ಚಿಸಲಾಗಿಲ್ಲ. ಬಳಿಕ ಜನವರಿ 6 ರಂದು ಮೊದಲ ಬಾರಿಗೆ ಬೆಲೆಗಳನ್ನು ಹೆಚ್ಚಿಸಲಾಯಿತು.

ಅಬಕಾರಿ ಸುಂಕ ಹೆಚ್ಚಳ ಪರಿಣಾಮ
ಕೋವಿಡ್‌ ಅವಧಿಯಲ್ಲಿ ಜಾರಿಗೊಳಿಸಲಾದ ಲಾಕ್‌ಡೌನ್  ನಡುವೆಯೇ ಮೇ 6ರಂದು, ಅಬಕಾರಿ ಸುಂಕವನ್ನು ಪ್ರತೀ ಲೀಟರ್‌ ಪೆಟ್ರೋಲ್‌ಗೆ 10 ರೂ. ಮತ್ತು ಡೀಸೆಲ್‌ಗೆ 13 ರೂ.ನಂತೆ ಹೆಚ್ಚಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪೆನಿಗಳಾದ ಇಂಡಿಯನ್ ಆಯಿಲ್, ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ಸಂಸ್ಥೆಗಳು ಪೆಟ್ರೋಲ್-ಡೀಸೆಲ್ ಮೇಲೆ ವಿಧಿಸಲಾದ ಹೆಚ್ಚಿನ ಸುಂಕವನ್ನು ಭರಿಸಲಿವೆ. ಹೀಗಾಗಿ ಅದು ಗ್ರಾಹಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರಕಾರ ಅಂದು ಹೇಳಿತ್ತು. ಆದರೆ ಮೇ 6ರಂದು ಹೊಸದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತೀ ಲೀಟರ್‌ಗೆ 71.26 ರೂ.ನಷ್ಟಿತ್ತು. ಈಗ ಅವುಗಳ ಬೆಲೆ 85.70 ರೂ.ಗೆ ಏರಿಕೆಯಾಗಿದೆ. 69.39 ರೂ.ಗೆ ಮಾರಾಟವಾಗುತ್ತಿದ್ದ ಡೀಸೆಲ್ ಈಗ 75.88 ರೂ.ಗೆ ಮಾರಾಟವಾಗುತ್ತಿದೆ.

ಸುಂಕಗಳೇ ದುಬಾರಿಯಾಗುತ್ತಿವೆ?
ಕಚ್ಚಾ ತೈಲದಿಂದ ಪೆಟ್ರೋಲ್-ಡೀಸೆಲ್‌ಗಳು ಗ್ರಾಹಕರಿಗೆ ದೊರೆಯುವ ಮಧ್ಯೆ ಇಂಧನ ವಿಪರೀತ ದರ ಏರಿಕೆಯನ್ನು ಕಾಣುತ್ತದೆ. ಕಚ್ಚಾತೈಲ ಹೊರ ದೇಶದಿಂದ ಬರುತ್ತದೆ. ಬಳಿಕ ಸಂಸ್ಕರಣಾ ಘಟಕಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಪ್ರತ್ಯೇಕಿಸಲಾಗುತ್ತದೆ. ಅಲ್ಲಿಂದ ಅವುಗಳು ತೈಲ ಕಂಪೆನಿಗಳಿಗೆ ಹೋಗುತ್ತದೆ. ತೈಲ ಕಂಪೆನಿಗಳು (ಡೀಲರ್‌ಗಳು) ಇವನ್ನು ಪೆಟ್ರೋಲ್ ಪಂಪ್‌ಗಳಿಗೆ ತಲುಪಿಸುತ್ತವೆ. ಇಲ್ಲಿ ಡೀಲರ್‌ಗಳಿಗೆ ಅವರ ಲಾಭವನ್ನು ಇಟ್ಟುಕೊಂಡು ಮಾರಾಟ ಮಾಡಲಾಗುತ್ತದೆ. ಪೆಟ್ರೋಲ್ ಪಂಪ್‌ಗೆ ಬಂದ ಬಳಿಕ ಕೇಂದ್ರ ಮತ್ತು ರಾಜ್ಯ ಸರಕಾರವು ನಿರ್ಧರಿಸುವ ತೆರಿಗೆಯನ್ನು ಸೇರಿಸಲಾಗುತ್ತದೆ. ಹೀಗಾಗಿ ಒಟ್ಟು ಸುಂಕಗಳ ಮೊತ್ತವನ್ನು ಸೇರಿಸಿ ಮಾರಾಟ ಮಾಡಲಾಗುತ್ತದೆ.

ಕೇಂದ್ರ ಸರಕಾರದ ಅಬಕಾರಿ ಸುಂಕವನ್ನು ವಿಧಿಸುವುದರ ಹೊರತಾಗಿ, ರಾಜ್ಯ ಸರಕಾಗಳು ಸಹ ವ್ಯಾಟ್ ವಿಧಿಸುವ ಮೂಲಕ ಇದರಿಂದ ಆದಾಯ ಗಳಿಸುತ್ತವೆ. ವ್ಯಾಟ್‌ ಅಂದರೆ ಮೌಲ್ಯವರ್ಧಿತ ತೆರಿಗೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಗಳಿಗೆ ವ್ಯಾಟ್ ದರವೂ ಬದಲಾಗುತ್ತದೆ. ರಾಜಸ್ಥಾನ ಸರಕಾರವು ಇಡೀ ದೇಶದಲ್ಲಿ ಅತೀ ಹೆಚ್ಚು ವ್ಯಾಟ್ ವಿಧಿಸುತ್ತದೆ. ಇಲ್ಲಿ ಪೆಟ್ರೋಲ್ ಮೇಲೆ ಶೇ. 38 ಮತ್ತು ಡೀಸೆಲ್ ಮೇಲೆ ಶೇ. 28 ತೆರಿಗೆ ವಿಧಿಸಲಾಗುತ್ತದೆ.

ಉದಾಹರಣೆಗೆ
ಪೆಟ್ರೋಲ್: ಮೂಲ ಬೆಲೆ 28.03 ರೂ., ಬಾಡಿಗೆ 0.37 ರೂ., ಅಬಕಾರಿ ಸುಂಕ 32.98 ರೂ., ಡೀಲರ್‌ಗಳ ಕಮಿಷನ್‌ 3.67 ರೂ., ವ್ಯಾಟ್ 19.55 ರೂ., ಒಟ್ಟು ಬೆಲೆ 84.70 ರೂ..
ಡಿಸೇಲ್‌: ಮೂಲ ಬೆಲೆ 29.19 ರೂ., ಬಾಡಿಗೆ 0.34 ರೂ., ಅಬಕಾರಿ ಸುಂಕ 31.83 ರೂ., ಡೀಲರ್‌ಗಳ ಕಮಿಷನ್‌ 2.53 ರೂ., ವ್ಯಾಟ್ 10.99 ರೂ., ಒಟ್ಟು ಬೆಲೆ 74.88 ರೂ.

(ಈ ಅಂಕಿಅಂಶಗಳು ಜನವರಿ 16ರ ದಿಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆವನ್ನು ಆಧರಿಸಿವೆ)

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.