ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸಲು ಪಿಎಫ್ ಐ ಸಂಚು ರೂಪಿಸಿತ್ತು: ಇ.ಡಿ ಆರೋಪ
ವಿದೇಶದಿಂದ ಭಾರತದಲ್ಲಿರುವ ಪಿಎಫ್ಐಗೆ ಹಣ ವರ್ಗಾವಣೆ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ದೂರಿದೆ.
Team Udayavani, Sep 24, 2022, 11:56 AM IST
ನವದೆಹಲಿ: ಕೆಲವು ದಿನಗಳ ಹಿಂದೆ ದೇಶಾದ್ಯಂತ ಪಿಎಫ್ ಐ ಕಚೇರಿಗಳ ಮೇಲೆ ಎನ್ ಐಎ, ಇ.ಡಿ ದಾಳಿ ನಡೆಸಿದ್ದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಜುಲೈನಲ್ಲಿ ಬಿಹಾರದ ಪಾಟ್ನಾದಲ್ಲಿನ ಸಮಾವೇಶದಲ್ಲಿ ಭಾಗವಹಿಸಿದ್ದ ವೇಳೆ ಪಿಎಫ್ ಐ ದಾಳಿ ನಡೆಸಲು ಸಂಚು ರೂಪಿಸಿತ್ತು ಎಂಬುದಾಗಿ ಜಾರಿ ನಿರ್ದೇಶನಾಲಯ ಶನಿವಾರ (ಸೆಪ್ಟೆಂಬರ್ 24) ಆರೋಪಿಸಿದೆ.
ಇದನ್ನೂ ಓದಿ:ಇನ್ ದಿ ಏರ್.. ಶ್ರೀಶಾಂತ್ ಟೇಕ್ಸ್ ಇಟ್…: ಮೊದಲ ಟಿ20 ವಿಶ್ವಕಪ್ ಗೆಲುವಿಗೆ 15ರ ಸಂಭ್ರಮ
ಪಾಟ್ನಾದಲ್ಲಿ ದಾಳಿ ನಡೆಸುವ ಉದ್ದೇಶದ ಜೊತೆಗೆ ಏಕಕಾಲದಲ್ಲಿ ಉತ್ತರಪ್ರದೇಶದ ವಿವಿಧ ಸೂಕ್ಷ್ಮ ಸ್ಥಳಗಳಲ್ಲಿ ದಾಳಿ ನಡೆಸಲು ಮಾರಕ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿರುವುದಾಗಿ ತಿಳಿಸಿದೆ.
ಗುರುವಾರ ಕೇರಳದಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದ ವೇಳೆ ಪಿಎಫ್ ಐ ಸದಸ್ಯ ಶಫೀಖ್ ಪಾಯೆತ್ ಎಂಬಾತನನ್ನು ಬಂಧಿಸಿತ್ತು. ಆತ ವಿಚಾರಣೆ ಸಂದರ್ಭದಲ್ಲಿ, ಜುಲೈ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಟ್ನಾಕ್ಕೆ ಭೇಟಿ ನೀಡಿದ ವೇಳೆ ದಾಳಿ ನಡೆಸಲು ಪಿಎಫ್ ಐ ತರಬೇತಿ ಶಿಬಿರ ನಡೆಸಿತ್ತು ಎಂದು ಬಾಯ್ಬಿಟ್ಟಿರುವುದಾಗಿ ಇ.ಡಿ ವಿವರಿಸಿದೆ.
ಪಾಯೆತ್ ಈ ಹಿಂದೆ ಕತಾರ್ ನಲ್ಲಿ ಉದ್ಯೋಗ ಮಾಡುತ್ತಿದ್ದ ವೇಳೆಯಲ್ಲಿ ತನ್ನ ಎನ್ ಐಆರ್ ಖಾತೆಯನ್ನು ಅಕ್ರಮವಾಗಿ ಬಳಸಿಕೊಂಡು ದೇಶದಲ್ಲಿ ಗಲಭೆ ಸೃಷ್ಟಿಸಲು ವಿದೇಶದಿಂದ ಭಾರತದಲ್ಲಿರುವ ಪಿಎಫ್ಐಗೆ ಹಣ ವರ್ಗಾವಣೆ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ದೂರಿದೆ.
ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡಿದ್ದರಿಂದ ಕಳೆದ ವರ್ಷ ಪಾಯೆತ್ ಗೆ ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು ಎಂದು ಇ.ಡಿ. ತಿಳಿಸಿದೆ.
ಕೆಲವೇ ವರ್ಷಗಳಲ್ಲಿ ಪಿಎಫ್ ಐ ಖಾತೆಗಳಲ್ಲಿ 120 ಕೋಟಿಗೂ ಅಧಿಕ ಹಣ ಠೇವಣಿಯಾಗಿರಿಸಲಾಗಿದೆ. ಭಾರತ ಹಾಗೂ ವಿದೇಶದಿಂದ ಅನುಮಾನಾಸ್ಪದ ಮೂಲಗಳಿಂದ ಪಿಎಫ್ ಐ ಖಾತೆಗಳಿಗೆ ಹಣ ಜಮಾವಣೆಯಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ