ತಮಿಳುನಾಡು ವಿಧಾನಸಭೆಯಲ್ಲಿ ಸ್ಪೀಕರ್ ಅಧಿಕಾರ ತೋರಿಸಿದ್ದ ಮಾಜಿ ಸ್ಪೀಕರ್ ಪಾಂಡಿಯನ್ ವಿಧಿವಶ

ಡಿಎಂಕೆ ತೊರೆದ ನಂತರ ಎಂಜಿಆರ್ ಜತೆ ಎಐಎಡಿಎಂಕೆ ಸ್ಥಾಪಿಸುವಲ್ಲಿ ಮುಂಚೂಣಿಯಲ್ಲಿದ್ದರು.

Team Udayavani, Jan 4, 2020, 4:53 PM IST

Ex-speakar

ಚೆನ್ನೈ:ಸ್ಪೀಕರ್ ಅಂದ್ರೆ ರಬ್ಬರ್ ಸ್ಟ್ಯಾಂಪ್ ಅಲ್ಲ. ಆಕಾಶದೆತ್ತರ ಅಧಿಕಾರ ಇದೆ ಎಂದು ಹೇಳಿ ತೋರಿಸಿಕೊಟ್ಟಿದ್ದ ತಮಿಳುನಾಡು ವಿಧಾನಸಭೆಯ ಮಾಜಿ ಸ್ಪೀಕರ್, ಆಡಳಿತಾರೂಢ ಎಐಎಡಿಎಂಕೆ ಹಿರಿಯ ಮುಖಂಡ ಪಿಎಚ್ ಪಾಂಡಿಯನ್(74ವರ್ಷ) ಶನಿವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾಂಡಿಯನ್ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಪಾಂಡಿಯನ್ ನಿಕಟವರ್ತಿ ತಿಳಿಸಿರುವುದಾಗಿ ವರದಿ ಹೇಳಿದೆ.

ಎಐಎಡಿಎಂಕೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ಪಾಂಡಿಯನ್, ಡಿಎಂಕೆ ತೊರೆದ ನಂತರ ಎಂಜಿಆರ್ ಜತೆ ಎಐಎಡಿಎಂಕೆ ಸ್ಥಾಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ಪಾಂಡಿಯನ್ ನಾಲ್ಕು ಬಾರಿ ಶಾಸಕರಾಗಿದ್ದರು. ಎಂಜಿಆರ್ ಕಾಲಾವಧಿಯಲ್ಲಿ (1985-89) ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1999ರಲ್ಲಿ ತಿರುನೆಲ್ವೇಲಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಸಂಪಾದಕರಿಗೆ ಜೈಲುಶಿಕ್ಷೆ ವಿಧಿಸಿದ್ದ ಸ್ಪೀಕರ್!

ಸ್ಪೀಕರ್ ಗೆ ಬಾನೆತ್ತರದ ಅಧಿಕಾರವಿದೆ ಎಂದು ಪಾಂಡಿಯನ್ ಹೇಳುತ್ತಿದ್ದರು. ತಮ್ಮ ಅಧಿಕಾರವನ್ನು ಚಲಾಯಿಸಿದ್ದರು ಕೂಡಾ. ತಮಿಳು ವಾರ ಪತ್ರಿಕೆ ವಿಕಟನ್ ನಲ್ಲಿ ಎಂಜಿಆರ್ ಅವರನ್ನು ಟೀಕಿಸುವ ವ್ಯಂಗ್ಯಚಿತ್ರವನ್ನು ಪ್ರಕಟಿಸಿತ್ತು. ಸ್ಪೀಕರ್ ಪಾಂಡಿಯನ್ ಅವರು ಪತ್ರಿಕಾ ಸಂಪಾದಕರಿಗೆ ನೋಟಿಸ್ ಜಾರಿ ಮಾಡಿದ್ದರು.

ಸಂಪಾದಕ ಬಾಲಸುಬ್ರಮಣಿಯನ್ ಅವರು ಸ್ಪೀಕರ್ ಅವರನ್ನು ಭೇಟಿಯಾಗುವ ಮೊದಲೇ ಕ್ಷಮೆಯಾಚಿಸುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಬಾಲಸುಬ್ರಮಣಿಯನ್ ಅದನ್ನು ನಿರಾಕರಿಸಿದ್ದರು. ನಂತರ ಸ್ಪೀಕರ್ ಪಾಂಡಿಯನ್ ಅವರು ಸಂಪಾದಕ ಬಾಲಸುಬ್ರಮಣಿಯನ್ ಗೆ ಮೂರು ತಿಂಗಳ ಜೈಲು ಶಿಕ್ಷೆ ನೀಡಿ ಆದೇಶ ನೀಡಿದ್ದರು. ಈ ಘಟನೆ 80ರ ದಶಕದಲ್ಲಿ ಮಾಧ್ಯಮಗಳಲ್ಲಿ ಹೆಡ್ ಲೈನ್ ಆಗಿತ್ತು ಎಂದು ವರದಿ ವಿವರಿಸಿದೆ.

ಈ ವಿಷಯ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸ್ಪೀಕರ್ ಆಗಿ ನೋಟಿಸ್ ಜಾರಿ ಮಾಡಿದ್ದೇನೆ. ಆದರೆ ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದು, ಸ್ಪೀಕರ್ ಆದವರಿಗೆ ಆಕಾಶದೆತ್ತರ ಅಧಿಕಾರವಿದೆ ಎಂದು ವಾದಿಸಿದ್ದರು.

ಎಂಜಿಆರ್ ನಿಧನದ ನಂತರ ಪಾಂಡಿಯನ್ ಎಂಜಿಆರ್ ಪತ್ನಿ ಜಾನಕಿ ರಾಮಚಂದ್ರನ್ ಅವರ ಬೆಂಬಲಕ್ಕೆ ನಿಂತಿದ್ದರು. ಆದರೆ ನಂತರ ಎಐಎಡಿಎಂಕೆ ಜೆ.ಜಯಲಲಿತಾ ಅವರ ಹಿಡಿತಕ್ಕೆ ಹೋದ ಮೇಲೆ ತಮ್ಮ ನಿಷ್ಠೆಯನ್ನು ಜಯಲಲಿತಾರತ್ತ ಬದಲಾಯಿಸಿಕೊಂಡಿದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.