
ಆಮ್ ಆದ್ಮಿ ಪಕ್ಷಕ್ಕೆ ಉದ್ಯಮಿ ಮಹೇಶ್ ಸಾವನಿ ಸೇರ್ಪಡೆ ಬೆಳವಣಿಗೆಯ ಸಂಕೇತ : ಮನೀಶ್ ಸಿಸೋಡಿಯಾ
Team Udayavani, Jun 28, 2021, 3:43 PM IST

ಸೂರತ್ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷದ ಆಡಳಿತ ವಯಖರಿಯನ್ನು ಮೆಚ್ಚಿ ಹಲವಾರು ಮಂದಿ ಆಮ್ ಆದ್ಮಿ ಪಕ್ಷದತ್ತ ಮುಖಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಗುಜರಾತ್ ನ ದೊಡ್ಡ ಉದ್ಯಮಿ ಮಹೇಶ್ ಸಾವನಿ ಅವರನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಸೋಡಿಯಾ, ಗುಜರಾತ್ ನಲ್ಲಿ ನಮ್ಮ ಪಕ್ಷ ಬೆಳವಣಿಗೆ ಆಗುತ್ತಿರುವುದರ ಬಗ್ಗೆ ನಮಗೆ ಹೆಮ್ಮೆ ಇದೆ. ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷ ಬೆಳವಣಿಗೆಗೆ ಇದೂ ಕೂಡ ಒಂದು ಸಾಕ್ಷಿ. ಗುಜರಾತ್ ನ ದೊಡ್ಡ ಉದ್ಯಮಿ ಹಾಗೂ ದಾನಿ ಸವಾನಿ ನಮ್ಮ ಪಕ್ಷಕ್ಕೆ ಇಂದು(ಸೋಮವಾರ, ಜೂನ್ 28) ಸೇರಿರುವುದು ನಮಗೆ ಆನೆ ಬಲ ಬಂದಂತಾಗಿದೆ ಎಂದಿದ್ದಾರೆ.
ಇದನ್ನೂ ಓದಿ : ಕೇಂದ್ರಾಡಳಿತ ಪ್ರದೇಶವಾದ ಬಳಿಕ ಲಡಾಖ್ ನಲ್ಲಿ ಭಯೋತ್ಪಾದನೆ ಇಳಿಕೆ: ರಾಜ್ ನಾಥ್ ಸಿಂಗ್
4 ತಿಂಗಳೊಳಗೆ, ಎಎಪಿ(ಆಮ್ ಆದ್ಮಿ ಪಾರ್ಟಿ) ನ ವಿದ್ಯಾವಂತ ಯುವಕರ ತಂಡದ ಪರಿಶ್ರಮದಿಂದಾಗಿ ಗುಜರಾತ್ ನಲ್ಲಿ ಪಕ್ಷ ಬೆಳೆಯುತ್ತಿದೆ, ಉತ್ತಮ ಕೆಲಸ ಮಾಡುತ್ತಿದೆ. ದೆಹಲಿಯಲ್ಲಿ ಎಎಪಿ ಕೆಲಸವು ಜನಪ್ರಿಯತೆಯನ್ನು ಗಳಿಸಿದೆ ಮಾತ್ರವಲ್ಲ, ನಾಯಕರು ಮತ್ತು ಸ್ವಯಂಸೇವಕರ ಪ್ರಯತ್ನದಿಂದಾಗಿ ಗುಜರಾತ್ ನಲ್ಲಿನ ಕೆಲಸವೂ ಜನಪ್ರಿಯತೆಯನ್ನು ಗಳಿಸುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ದೇಶವನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ಯುವ ಕಾರಣದಿಂದಾಗಿ ಎಎಪಿ ಯ ಕಾರ್ಯವನ್ನು ಮೆಚ್ಚಿ ದೇಶದಾದ್ಯಂತ ಇಂದು ಯುವಕರು ನಮ್ಮ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರುವುದು ನಮಗೆ ಹೊಸ ಭರವಸೆ ಮೂಡಿಸಿದೆ. ಏತನ್ಮಧ್ಯೆ, ಗುಜರಾತ್ ನ ಅಗ್ರ ಪಂಕ್ತಿಯ ಉದ್ಯಮಿಗಳಲ್ಲಿ ಒಬ್ಬರಾದ ಮಹೇಶ್ ಸಾವನಿ ನಮ್ಮೊಂದಿಗೆ ಕೈ ಜೋಡಿಸಿದ್ದಾರೆ. ನಮ್ಮ ಪಕ್ಷ ದೇಶದದ್ಯಂತ ಹೊಸ ಅಲೆಯನ್ನು ಸೃಷ್ಟಿಸಲಿದೆ ಎಂದು ಅವರು ಹೇಳಿದ್ದಾರೆ.
ಗುಜರಾತ್ ನಲ್ಲಿ ಬದಲಾವಣೆಯನ್ನು ಕಾಣುವ ತುರ್ತು ಅಗತ್ಯದ ಕುರಿತು ಮಾತನಾಡಿದ ಸಿಸೋಡಿಯಾ, “ಮಹೇಶ್ ಜಿ ಎಎಪಿಗೆ ಸೇರ್ಪಡೆಗೊಂಡಿರುವುದರಿಂದ, ಗುಜರಾತ್ ನ ಉದ್ಯಮ ಕ್ಷೇತ್ರ ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯುತ್ತಾರೆನ್ನುವುದರಲ್ಲಿ ಸಂಶಯವಿಲ್ಲ. ನಮ್ಮ ಪಕ್ಷವೂ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತದೆ. ಗುಜರಾತ್ ನಲ್ಲಿ ಎಎಪಿ ಯ ಬೆಳವಣಿಗೆ ಹೊಸ ಬದಲಾವಣೆಯ ಸಂಕೇತವಾಗಿದೆ. ಎಎಪಿ ಈ ಬದಲಾವಣೆ ರಾಜ್ಯಕ್ಕೆ ಮುಖ್ಯ ಎನ್ನುವ ದೃಷ್ಟಿಯಿಂದ ನಮ್ಮನ್ನು ಮುಂದಿನ ಚುನಾವಣೆಯಲ್ಲಿ ಆರಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ನಲ್ಲಿ ಸುರ್ಜೇವಾಲ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ: ಬಿಜೆಪಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ವಿಮಾನದೊಳಗೆ ಬೆತ್ತಲಾದ ಮಹಿಳೆ: ಮುಂಬೈ ಪೊಲೀಸರಿಂದ ಬಂಧನ

ವಿಶಾಖಪಟ್ಟಣಂ ಆಂಧ್ರಪ್ರದೇಶದ ನೂತನ ರಾಜಧಾನಿಯಾಗಲಿದೆ : ಸಿಎಂ ಜಗನ್ ಮೋಹನ್ ರೆಡ್ಡಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿ ಶಾರುಖ್ ಸಿನಿಮಾ

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಬಾಗಲಕೋಟೆ: ತೋಟಗಾರಿಕೆ ವಿವಿಗೆ ನೀರಿನ ಸ್ವಾವಲಂಬನೆ

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ