ತಮಿಳು ನಾಡು ಪೊಲೀಸರ ದಬ್ಟಾಳಿಕೆ: ಯೋಗೇಂದ್ರ ಯಾದವ್‌ ಆಕ್ರೋಶ


Team Udayavani, Sep 8, 2018, 4:05 PM IST

yogendra-yadav-700.jpg

ಚೆನ್ನೈ : ಸೇಲಂ-ಚೆನ್ನೈ ಅಷ್ಟ ಪಥ ಹೆದ್ದಾರಿ ನಿರ್ಮಾಣವನ್ನು ಪ್ರತಿಭಟಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭೇಟಿಯಾಗಲು ಹೋಗುತ್ತಿದ್ದ ಸ್ವರಾಜ್‌ ಇಂಡಿಯಾ ಸಂಘಟನೆ ಸ್ಥಾಪಕ ಮತ್ತು ರಾಜಕಾರಣಿ, 55ರ ಹರೆಯದ ಯೋಗೇಂದ್ರ ಯಾದವ್‌ ಅವರನ್ನು ತಡೆದು ವಶಕ್ಕೆ ತೆಗೆದುಕೊಂಡ ತಮಿಳು ನಾಡು ಪೊಲೀಸರು ಯಾದವ್‌ ಅವರ ಮೊಬೈಲ್‌ ಫೋನನ್ನು ಕಸಿದು, ತಳ್ಳಾಡಿ, ವ್ಯಾನಿಗೆ ತುರುಕಿದರೆಂದು ಆರೋಪಿಸಲಾಗಿದೆ. 

ಯೋಗೇಂದ್ರ ಯಾದವ್‌  ಅವರು 2015ರಲ್ಲಿ ಅರವಿಂದ ಕೇಜ್ರಿವಾಲರ ಆಮ್‌ ಆದ್ಮಿ ಪಕ್ಷದಿಂದ ಹೊರಬಿದ್ದ ಬಳಿಕ ಸ್ವರಾಜ್‌ ಇಂಡಿಯಾ ಸಂಘಟನೆಯನ್ನು ಸ್ಥಾಪಿಸಿದ್ದರು. 

ತಮಿಳು ನಾಡು ಪೊಲೀಸರು ತನ್ನನ್ನು ವಶಕ್ಕೆ ತೆಗೆದುಕೊಂಡು ವರ್ತಿಸಿದ ರೀತಿಯನ್ನು ಖಂಡಿಸಿ ಯಾದವ್‌ ಈ ರೀತಿ ಟ್ವೀಟ್‌ ಮಾಡಿದ್ದಾರೆ : 

“ತಮಿಳು ನಾಡು ಪೊಲೀಸರು ತಿರು ಅಣ್ಣಾಮಲೆ ಜಿಲ್ಲೆಯ ಚೆಂಗಂ ಪಿಎಸ್‌ನಲ್ಲಿ  ನನ್ನನ್ನು ಮತ್ತು ತಂಡದವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಾವಿಲ್ಲಿ ಅಷ್ಟಪಥ ಹೆದ್ದಾರಿ ವಿರುದ್ಧದ ಆಂದೋಲನಕಾರರ ಆಹ್ವಾನದ ಮೇರೆಗೆ ಬಂದಿದ್ದೇವೆ; ಪ್ರತಿಭಟನೆ ನಿರತ ರೈತರನ್ನು ಭೇಟಿಯಾಗದಂತೆ ಪೊಲೀಸರು ನಮ್ಮನ್ನು ತಡೆದಿದ್ದಾರೆ. ನನ್ನ ಫೋನನ್ನು ಕಸಿದುಕೊಂಡು ನನ್ನನ್ನು ತಳ್ಳಾಡಿ ಪೊಲೀಸ್‌ ವ್ಯಾನಿಗೆ ನನ್ನನ್ನು ತುರುಕಿದ್ದಾರೆ; ತಮಿಳು ನಾಡು ಪೊಲೀಸರಿಂದ ನನಗಾಗಿರುವ ನೇರ ಅನುಭವ ಇದಾಗಿದೆ’

“ನಾನು ತಿರು ಅಣ್ಣಾಮಲೆ ಕಲೆಕ್ಟರ್‌ ಕುಂದಸಾಮಿ ಜತೆಗೆ ಫೋನಿನಲ್ಲಿ ಮಾತನಾಡಿದ್ದೇನೆ; ಅಷ್ಟಪಥ ಹೆದ್ದಾರಿ ಸಂಬಂಧ ಪೊಲೀಸರು ನಡೆಸಿರುವ ಅತಿರೇಕಗಳ ಬಗೆಗಿನ ರೈತರ ದೂರು ಮತ್ತು ಬಲವಂತದ ಭೂಸ್ವಾಧೀನದ ಬಗ್ಗೆ ಅವರಿಗೆ ಹೇಳಿದ್ದೇನೆ. ಆದರೆ ಅವರು ಪೊಲೀಸರ ಹಸ್ತಕ್ಷೇಪವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಕಲೆಕ್ಟರ್‌ಗೆ ಫೋನ್‌ ಮಾಡಿದ ನಿಮಿಷದೊಳಗೆ ನನ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ’ ಎಂದು ಯಾದವ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

1-aaaa

Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್‌ಗಳು ಧ್ವಂಸ!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.