ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ
Team Udayavani, Oct 22, 2021, 3:51 PM IST
ಹೊಸದಿಲ್ಲಿ: ದೇವಾಲಯಗಳ ದ್ವಾರಗಳನ್ನು ತೆರೆದ ನಂತರ ಇಲ್ಲಿಯವರೆಗೆ ಎರಡು ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಚಾರ್ ಧಾಮ್ ತಲುಪಿದ್ದಾರೆ ಎಂದು ಉತ್ತರಾಖಂಡ ಚಾರ್ ಧಾಮ್ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಡಾ.ಹರೀಶ್ ಗೌರ್ ಶುಕ್ರವಾರ ಹೇಳಿದ್ದಾರೆ.
ನವೆಂಬರ್ 5 ರಂದು ಗಂಗೋತ್ರಿ ಧಾಮ, ನವೆಂಬರ್ 6 ರಂದು ಕೇದಾರನಾಥ ಧಾಮ, ಯಮುನೋತ್ರಿ ಧಾಮ ಹಾಗೂ ನವೆಂಬರ್ 20 ರಂದು ಶ್ರೀ ಬದರಿನಾಥ ಧಾಮವನ್ನು ಮುಚ್ಚಲಾಗುವುದು ಎಂದು ಅವರು ತಿಳಿಸಿದ್ದಾರೆ.
“ತೃತೀಯ ಕೇದಾರ ಶ್ರೀ ತುಂಗನಾಥ ದೇವಸ್ಥಾನದ ಬಾಗಿಲು ಅಕ್ಟೋಬರ್ 30 ರಂದು ಮತ್ತು ದ್ವಿತೀಯ ಕೇದಾರ ಶ್ರೀ ಮದ್ಮಹೇಶ್ವರ ದೇವಾಲಯ ನವೆಂಬರ್ 22 ರಂದು ಚಳಿಗಾಲದ ಹಿನ್ನೆಲೆಯಲ್ಲಿ ಮುಚ್ಚಲಾಗುವುದು. ನವೆಂಬರ್ 25 ರಂದು ಶ್ರೀ ಮದ್ಮಹೇಶ್ವರ ಜಾತ್ರೆ ನಡೆಯಲಿದೆ” ಎಂದು ಅವರು ತಿಳಿಸಿದರು.
ಇದನ್ನೂ ಓದಿ:- ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್
ಚಾರ್ ಧಾಮ್ ಯಾತ್ರೆಯು ಸೆಪ್ಟೆಂಬರ್ 16 ರಂದು ನೈನಿತಾಲ್ ಹೈಕೋರ್ಟ್ ಯಾತ್ರೆಯ ಮೇಲಿನ ನಿಷೇಧವನ್ನು ತೆಗೆದುಹಾಕಿದ ನಂತರ ಆರಂಭವಾಗಿತ್ತು. ಸೆಪ್ಟೆಂಬರ್ 18 ರಂದು ಕಡ್ಡಾಯವಾಗಿ ಕೋವಿಡ್ -19 ನೆಗೆಟಿವ್ ವರದಿಯೊಂದಿಗೆ ಕೋವಿಡ್ ಲಸಿಕೆ ಹಾಕಿದ ಭಕ್ತರಿಗೆ ಮಾತ್ರ ಅನುಮತಿ ನೀಡಲಾಗಿತ್ತು.
ಈ ಯಾತ್ರೆಗೆ ಪ್ರತಿ ವರ್ಷ ದೇಶ ಮತ್ತು ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?
ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ
ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…
ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು
ಏರ್ ಇಂಡಿಯಾ ಮತ್ತು ನೇಪಾಳ ಏರ್ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!
MUST WATCH
ಹೊಸ ಸೇರ್ಪಡೆ
ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ
ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್
ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ