Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
Team Udayavani, May 9, 2024, 5:41 PM IST
ಹೊಸದಿಲ್ಲಿ: ಸ್ಯಾಮ್ ಪಿತ್ರೋಡಾ ಅವರ ವಿವಾದಾತ್ಮಕ ಹೇಳಿಕೆಗೆ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಗುರುವಾರ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ್ ಮಾತನಾಡಿ, ವೈವಿಧ್ಯತೆಯು ಭಾರತದ ಅತಿದೊಡ್ಡ ಶಕ್ತಿಯಾಗಿದೆ. ಆದರೆ ಕಾಂಗ್ರೆಸ್ ನಾಯಕರ ಜನಾಂಗೀಯ ಹೇಳಿಕೆ ನಮ್ಮ ಏಕತೆ ಮತ್ತು ಸಮಗ್ರತೆಯನ್ನು ದುರುಪಯೋಗಪಡಿಸಿಕೊಳ್ಳುತ್ತದೆ. ಪಿತ್ರೋಡಾ ಅವರ ಈ ಹೇಳಿಕೆ ಸ್ವಯಂಪ್ರೇರಿತವಲ್ಲ. ಲೋಕಸಭೆ ಚುನಾವಣೆಯ ಮೂರು ಹಂತಗಳ ನಂತರ ಪಕ್ಷ ನೆಲಕಚ್ಚುತ್ತಿರುವುದನ್ನು ನೋಡಿದ ಕಾಂಗ್ರೆಸ್ ನಾಯಕರು ಈಗ ಜನಾಂಗೀಯ ಹೇಳಿಕೆಗಳನ್ನು ಆಶ್ರಯಿಸುತ್ತಿದ್ದಾರೆ ಎಂದರು.
ದೇಶದ ಜನರನ್ನು ಮತ್ತು ವಿದೇಶದಲ್ಲಿ ನೆಲೆಸಿರುವ ಭಾರತೀಯರನ್ನು ಅವಮಾನಿಸಿದ್ದಕ್ಕಾಗಿ ಪಕ್ಷದ ಮಾಜಿ ಮುಖ್ಯಸ್ಥ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪಿತ್ರೋಡಾ ಅವರು ತಮ್ಮ ನಿರಂತರ ವಿವಾದಾತ್ಮಕ ಹೇಳಿಕೆಗಳ ನಂತರ ಭಾರೀ ಟೀಕೆಗೆ ಒಳಗಾದ ನಂತರ ಭಾರತೀಯ ಸಾಗರೋತ್ತರ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
ಪಿತ್ರೋಡಾ ಅವರು ಪಾಡ್ಕ್ಯಾಸ್ಟ್ನ ನೀಡಿದ ಹೇಳಿಕೆಗಳು ಭಾರೀ ವಿವಾದವನ್ನು ಹುಟ್ಟುಹಾಕಿತ್ತು. ಭಾರತೀಯರ ವಿವಿಧ ಭಾಗಗಳ ಭೌತಿಕ ನೋಟವನ್ನು ವಿವರಿಸಿ ಚೈನೀಸ್, ಆಫ್ರಿಕನ್ನರು, ಅರಬ್ಬರು ಮತ್ತು ಬಿಳಿಯರಂತಹ ಜನಾಂಗೀಯ ಗುರುತುಗಳನ್ನು ಉಲ್ಲೇಖಿಸಿ ತುಲನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ
Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್!
MUST WATCH
ಹೊಸ ಸೇರ್ಪಡೆ
Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ
Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು
Kannada Cinema; ರಿಲೀಸ್ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..
Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು
HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು