ಕೇರಳದಲ್ಲಿ ಹೊಸ ಮಸೀದಿ ನಿರ್ಮಾಣಕ್ಕೆ ಅವಕಾಶ ಇಲ್ಲ; ಕೇರಳ ಹೈಕೋರ್ಟ್ ಆದೇಶ
Team Udayavani, Aug 26, 2022, 11:15 PM IST
ಕೊಚ್ಚಿ:ಹೊಸ ಮಸೀದಿಯ ನಿರ್ಮಾಣಕ್ಕೆ ಅನುಮತಿ ನಿರಾಕರಿಸಿ ಕೇರಳ ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಆದೇಶ ನೀಡಿದೆ.
ಈಗಾಗಲೇ ಹಲವು ಮಸೀದಿಗಳು ಇರುವ ಸ್ಥಳದಲ್ಲಿ ಹೊಸತನ್ನು ನಿರ್ಮಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾ.ಪಿ.ವಿ.ಕುಂಞಕೃಷ್ಣನ್ ನೇತೃತ್ವದ ನ್ಯಾಯಪೀಠ ಹೇಳಿದೆ.
ಕೇರಳದಲ್ಲಿ ಇರುವ ಜನರ ಸಂಖ್ಯೆಯನ್ನು ಹೋಲಿಕೆ ಮಾಡಿದರೆ ಧಾರ್ಮಿಕ ಕೇಂದ್ರಗಳ ಸಂಖ್ಯೆಯೇ ಇದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. “ಕೇರಳ ವಿಶೇಷ ರೀತಿಯ ಭೌಗೋಳಿಕ ಪ್ರದೇಶ ಹೊಂದಿದೆ. ಹೀಗಾಗಿಯೇ ಅದು ದೇವರೊಲಿದ ರಾಜ್ಯ ಎಂದು ಹೆಸರು ಪಡೆದಿದೆ. ಈಗ ಇರುವ ಧಾರ್ಮಿಕ ಕೇಂದ್ರಗಳ ಸಂಖ್ಯೆಯೇ ಹೆಚ್ಚಾಗಿದೆ. ಹೀಗಾಗಿಯೇ, ಹೊಸತರ ನಿರ್ಮಾಣಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
ಮುಸ್ಲಿಂ ಸಮುದಾಯಕ್ಕೆ ಮಸೀದಿ ಅಗತ್ಯವಾಗಿದೆ. ಆದರೆ, ಪವಿತ್ರ ಕುರಾನ್ನ ಪ್ರಕಾರ ಅಲ್ಲಲ್ಲಿ ಮಸೀದಿಯ ನಿರ್ಮಾಣ ಅಗತ್ಯವಿಲ್ಲ ಎಂದು ನ್ಯಾ.ಪಿ.ವಿ.ಕುಂಞಕೃಷ್ಣನ್ ಅಭಿಪ್ರಾಯಪಟ್ಟಿದ್ದಾರೆ.
“ಮನೆಯ ಪಕ್ಕದಲ್ಲಿಯೇ ಮಸೀದಿ ಇರಬೇಕು ಎಂದು ಹದೀಸ್ ಅಥವಾ ಪವಿತ್ರ ಕುರಾನ್ನಲ್ಲಿ ಉಲ್ಲೇಖವಾಗಿಲ್ಲ. ಮಸೀದಿ ಎಷ್ಟು ದೂರ ಇದೆ ಎನ್ನುವುದು ಮುಖ್ಯವಲ್ಲ. ಆದರೆ, ಅಲ್ಲಿಗೆ ಹೋಗುವುದು ಪ್ರಧಾನವಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ