ರೈಲಿನಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದೀರಾ.? ಭಾರತೀಯ ರೈಲ್ವೆಯ ಕೋವಿಡ್ ಗೈಡ್ಲೈನ್ಸ್ ಗಮನಿಸಿ
Team Udayavani, Apr 13, 2021, 12:23 PM IST
ನವ ದೆಹಲಿ : ದೇಶಾದ್ಯಂತ ಹಠಾತ್ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಡುವೆ, ನಿವು ಹೊರಹೋಗುವ ಮೊದಲು ಎಲ್ಲಾ ಪ್ರಮುಖ ಕೋವಿಡ್ ಮಾರ್ಗಸೂಚಿಗಳನ್ನು ಪರಿಶೀಲಿಸಬೇಕು. ನೀವು ಮುಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದರೆ, ಕೆಳಗೆ ತಿಳಿಸಲಾದ ಭಾರತೀಯ ರೈಲ್ವೆಯ ಇತ್ತೀಚಿನ ಕೋವಿಡ್ 19 ಮಾರ್ಗಸೂಚಿಗಳನ್ನು ಗಮನಿಸಿಕೊಳ್ಳಿ.
ಭಾರತೀಯ ರೈಲ್ವೆಯ ಇತ್ತೀಚಿನ ಕೋವಿಡ್ 19 ಮಾರ್ಗಸೂಚಿಗಳು :
ರೈಲ್ವೆ ಮಂಡಳಿಯ ಅಧ್ಯಕ್ಷ ಸುನೀತ್ ಶರ್ಮಾ ಅವರು ರೈಲಿನಲ್ಲಿ ಪ್ರಯಾಣಿಸಲು ಕೋವಿಡ್ 19 ಸೋಂಕಿನ ನೆಗೆಟಿವ್ ವರದಿಯ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಇತ್ತೀಚೆಗೆ ಹೇಳಿದ್ದರು. ಇದಲ್ಲದೆ, ಪ್ರಯಾಣಿಕರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಇತ್ತೀಚಿನ ಕೋವಿಡ್ 19 ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್ಗಳನ್ನು ಸಹ ಅನುಸರಿಸಬೇಕಾಗುತ್ತದೆ ಎಂದಿದ್ದರು.
ಓದಿ : ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು!
ಕೋವಿಡ್ 19 ಸಾಂಕ್ರಾಮಿಕ ಮತ್ತು ಸಂಬಂಧಿತ ಸ್ವಚ್ಛತತೆಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಆಹಾರ ಸೇವೆಯನ್ನು (service of cooked food ) ನಿಲ್ಲಿಸಿ, ರೈಲುಗಳಲ್ಲಿ ರೆಡಿ ಟು ಈಟ್ (ಆರ್ ಟಿ ಇ) ಸೇವೆಯನ್ನು ಆರಂಭಿಸಿತ್ತು.
ಇನ್ನು, ಕೋವಿಡ್ 19 ಗೆ ಮುಂಜಾಗ್ರತ ಕ್ರಮವಾಗಿ ರಕ್ಷಣಾತ್ಮಕ ವಸ್ತುಗಳಾದ ಮಾಸ್ಕ್, ಸ್ಯಾನಿಟೈಸರ್ ಗಳು, ಕೈಗವಸುಗಳು ಮತ್ತು ಟೇಕ್ ಅವೇ ಬೆಡ್ ರೋಲ್ ಕಿಟ್ಗಳು ರೈಲ್ವೇ ನಿಲ್ದಾಣಗಳ ಬಹುಪಯೋಗಿ ಸ್ಟಾಲ್ ಗಳ ಮೂಲಕ ಮಾರಾಟಕ್ಕೆ ಲಭ್ಯವಿರಲಿವೆ.
ರೈಲು ಸೇವೆಗಳನ್ನು ನಿಲ್ಲಿಸಲು ಅಥವಾ ಕಡಿತಗೊಳಿಸಲು ಯಾವುದೇ ಯೋಜನೆ ಇಲ್ಲ :
ರೈಲು ಸೇವೆಗಳನ್ನು ಕಡಿತಗೊಳಿಸುವ ಅಥವಾ ನಿಲ್ಲಿಸುವ ಯಾವುದೇ ಯೋಜನೆ ಇಲ್ಲ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಸುನೀತ್ ಶರ್ಮಾ ಇತ್ತೀಚೆಗೆ ಹೇಳಿಕೆ ನೀಡುವುದರ ಮೂಲಕ ಪ್ರಯಾಣಿಕರಿಗೆ ಭರವಸೆ ನೀಡಿದ್ದರು.
ಇನ್ನು, ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ರೈಲು ಸೇವೆಗಳನ್ನು ಮೊಟಕುಗೊಳಿಸುವ ಅಥವಾ ನಿಲ್ಲಿಸುವ ಯಾವುದೇ ಯೋಜನೆ ಇಲ್ಲ. ನಾವು ಅಗತ್ಯವಿರುವಷ್ಟು ಸೇವೆಗಳನ್ನು ನಡೆಸುತ್ತೇವೆ. ಪ್ರಯಾಣಿಕರು ಹೆಚ್ಚಾದರೇ ಹೆಚ್ಚುವರಿ ರೈಲು ಸೇವೆಗಳನ್ನು ಆರಂಭಿಸಲು ಕೂಡ ಇಲಖೆ ಕಾರ್ಯ ನಿರ್ವಹಿಸಲಿದೆ. ಕೋವಿಡ್ ಮಾರ್ಗ ಸೂಚಿಗಳನ್ನು ಬಳಸಿಕೊಂಡು ರೈಲು ಸೇವೆ ಮುಂದುವರಿಯುತ್ತದೆ. ಸೋಂಕಿನ ತೀವ್ರತೆಯ ಬಗ್ಗೆ ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ರೈಲು ಸೇವೆಗಳ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
ಸದ್ಯ, ದಿನನಿತ್ಯ ಅಂದಾಜು 1402 ವಿಶೇಷ ರೈಲುಗಳು ಸೇವೆ ನಡೆಸುತ್ತಿವೆ ಎಂದು ಇತ್ತೀಚೆಗೆ ರೈಲ್ವೆ ಇಲಾಖೆ ತಿಳಿಸಿತ್ತು. ಅದಲ್ಲದೇ, ಒಟ್ಟು 5381 ಉಪನಗರ ರೈಲು ಸೇವೆಗಳು ಮತ್ತು 830 ಪ್ಯಾಸೆಂಜರ್ ರೈಲು ಸೇವೆಗಳು ಸಹ ಕಾರ್ಯನಿರ್ವಹಿಸುತ್ತಿವೆ. ಇದಲ್ಲದೆ, 28 ವಿಶೇಷ ರೈಲುಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದೆ.
ಏಪ್ರಿಲ್ ಹಾಗೂ ಮೇ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾದರೇ, ಹೆಚ್ಚುವರಿ ರೈಲುಗಳ ಸೇವೆಗಳನ್ನು ಕೂಡ ನಿಯೋಜಿಸಲಾಗುತ್ತದೆ. ಗೋರಖ್ ಪುರ, ಪಾಟ್ನಾ, ದರ್ಬಂಗಾ, ವಾರಣಾಸಿ, ಗುವಾಹಟಿ, ಬಾರೌನಿ, ಪ್ರಯಾಗರಾಜ್, ಬೊಕಾರೊ, ರಾಂಚಿ ಮತ್ತು ಲಕ್ನೋ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ರೈಲುಗಳ ಬೇಡಿಕೆಯಿದೆ ಎಂದು ಇಲಾಖೆ ತಿಳಿಸಿತ್ತು.
ಓದಿ : ಜಲಿಯನ್ ವಾಲಾ ಬಾಗ್ ಹತ್ಯಾಕಾಂಡಕ್ಕೆ 102 ವರ್ಷ…ಬೈಸಾಕಿ ಯುಗಾದಿ ದಿನ ಸಂಭವಿಸಿದ್ದು ಮಾರಣಹೋಮ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ