ಉಲ್ಟಾ ಹೊಡೆದ ದೀದಿ
Team Udayavani, May 30, 2019, 6:00 AM IST
ಸಾಂವಿಧಾನಿಕ ಸಭ್ಯತೆಗೆ ಬೆಲೆಕೊಟ್ಟು ಮೋದಿ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಮಂಗಳವಾರವಷ್ಟೇ ಹೇಳಿಕೆ ನೀಡಿದ್ದ ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಬುಧವಾರ ಉಲ್ಟಾ ಹೊಡೆದಿದ್ದಾರೆ. ಬುಧವಾರ ಟ್ವೀಟ್ ಮಾಡಿದ ದೀದಿ, ‘ಹೊಸ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರಿಗೆ ಅಭಿನಂದನೆಗಳು. ನಿಮ್ಮ ಆಹ್ವಾನ ಪರಿಗಣಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ನಾನು ನಿರ್ಧರಿಸಿದ್ದೆ. ಆದರೆ, ಕಳೆದ ಒಂದು ಗಂಟೆಯಲ್ಲಿ ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ನೋಡಿ ಆಘಾತವಾಯಿತು. ಬಿಜೆಪಿ ನಾಯಕರು ಪ.ಬಂಗಾಲದಲ್ಲಿ 56 ಬಿಜೆಪಿ ಕಾರ್ಯಕರ್ತರನ್ನು ಹತ್ಯೆಗೈಯ್ಯಲಾಗಿದೆ ಎಂದು ಹೇಳುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಸುದ್ದಿ. ಬಂಗಾಲದಲ್ಲಿ ರಾಜಕೀಯ ಹತ್ಯೆ ನಡೆದಿಲ್ಲ. ವೈಯಕ್ತಿಕ ದ್ವೇಷ, ಕೌಟುಂಬಿಕ ಕಲಹಗಳಿಂದ ಈ ಹತ್ಯೆಗಳು ಆಗಿರಬಹುದು. ಈ ರೀತಿಯ ಸುಳ್ಳು ಸುದ್ದಿಗಳು ಬಿಜೆಪಿ ಹಬ್ಬಿಸುತ್ತಿರುವ ಹಿನ್ನೆಲೆಯಲ್ಲಿ ನಾನು ನಿರ್ಧಾರ ಬದಲಿಸಿದ್ದೇನೆ. ನಿಮ್ಮ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗಿಯಾಗುವುದಿಲ್ಲ. ನನ್ನನ್ನು ಕ್ಷಮಿಸಿ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ