ಆಂಫಾನ್ ಚಂಡಮಾರುತ ಹಾನಿ ಪ್ರದೇಶ ಸಮೀಕ್ಷೆ; ಪಶ್ಚಿಮಬಂಗಾಳಕ್ಕೆ 1 ಸಾವಿರ ಕೋಟಿ ಪರಿಹಾರ
ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿತ್ತು. ವೈಮಾನಿಕ ಸಮೀಕ್ಷೆ ವೇಳೆ ಪ್ರಧಾನಿ ಜತೆ ಬ್ಯಾನರ್ಜಿ, ಗವರ್ನರ್ ಜಗದೀಪ್ ಸಾಥ್ ನೀಡಿದ್ದರು
Team Udayavani, May 22, 2020, 4:40 PM IST
ಕೋಲ್ಕತಾ: ಆಂಫಾನ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೈಮಾನಿಕ ಸಮೀಕ್ಷೆ ನಡೆಸಿದರು. ಶುಕ್ರವಾರ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಿ ಮಧ್ಯಂತರವಾಗಿ ಒಂದು ಸಾವಿರ ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಆಂಫಾನ್ ಭೀಕರ ಚಂಡಮಾರುತದಲ್ಲಿ 80 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿತ್ತು. ವೈಮಾನಿಕ ಸಮೀಕ್ಷೆ ವೇಳೆ ಪ್ರಧಾನಿ ಜತೆ ಬ್ಯಾನರ್ಜಿ, ಗವರ್ನರ್ ಜಗದೀಪ್ ಸಾಥ್ ನೀಡಿದ್ದರು ಎಂದು ವರದಿ ತಿಳಿಸಿದೆ.
ಪಶ್ಚಿಮಬಂಗಾಳಕ್ಕೆ ಮುಂಗಡವಾಗಿ ಒಂದು ಸಾವಿರ ಕೋಟಿ ರೂಪಾಯಿ ಪರಿಹಾರ ನೀಡಿರುವುದಾಗಿ ಪ್ರಧಾನಿ ಮೋದಿ ಉತ್ತರ 24ನೇ ಪರಾಗಣ್ ನ ಬಾಸಿರಾತ್ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ ಬಳಿಕ ತಿಳಿಸಿದರು. ಆಂಫಾನ್ ನಿಂದ ಹಾನಿಗೊಳಗಾದವರಿಗೆ ಮನೆ ಕಳೆದುಕೊಂಡವರಿಗೆ, ಹಾನಿಗೊಂಡವರಿಗೆ ನೆರವು ನೀಡಲಾಗುವುದು ಎಂದರು.
ಇಂತಹ ಅಗ್ನಿಪರೀಕ್ಷೆ ಸಮಯದಲ್ಲಿ ಕೇಂದ್ರ ಸರ್ಕಾರ ಪಶ್ಚಿಮಬಂಗಾಳದ ಜತೆ ಇರುತ್ತೇವೆ. ನಾವು ಒಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಕೆಲಸವನ್ನು ಸಾಧಿಸಬೇಕಾಗಿದೆ ಎಂದು ಪ್ರಧಾನಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು