ಸಂಸತ್ತಿನ ಚಳಿಗಾಲದ ಅಧಿವೇಶನ: ಎಲ್ಲ ವಿಷಯ ಚರ್ಚೆಗೆ ಸಿದ್ಧ: ಪ್ರಧಾನಿ
Team Udayavani, Dec 10, 2018, 3:30 PM IST
ಹೊಸದಿಲ್ಲಿ : ನಾಳೆ ಮಂಗಳವಾರದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಅದಕ್ಕೆ ಮುನ್ನ ಸರಕಾರ ಸರ್ವ ಪಕ್ಷ ಸಭೆ ಕರೆದಿದ್ದು ವಿಪಕ್ಷಗಳ ಜತೆಗೆ ಎಲ್ಲ ವಿಷಯಗಳ ಚರ್ಚೆಗೆ ನಾವು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
“ವಿರೋಧ ಪಕ್ಷಗಳು ಎತ್ತಿರುವ ಎಲ್ಲ ವಿಷಯಗಳ ಬಗ್ಗೆ ನಾವು ಚರ್ಚೆಗೆ ಸಿದ್ಧ. ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಫಲಪ್ರದವೂ ರಚನಾತ್ಮಕವೂ ಆಗಿರುವುದೆಂದು ಹಾರೈಸುತ್ತೇನೆ. ಎಲ್ಲ ಪಕ್ಷಗಳಿಂದ ಸಂಸತ್ ಕಲಾಪ ಯಶಸ್ವಿಗೆ ಪೂರ್ಣ ಬೆಂಬಲ ಕೋರುತ್ತೇನೆ ಎಂದು ಪ್ರಧಾನಿ ಮೋದಿ ಅವರು ಉನ್ನತ ವಿಪಕ್ಷ ನಾಯಕರು ಭಾಗವಹಿಸಿದ್ದ ಸಭೆಯಲ್ಲಿ ಹೇಳಿದರು.
ಅಗತ್ಯ ಬಿದ್ದರೆ ತಡ ಸಂಜೆಯ ವರೆಗೂ ಮುಖ್ಯ ಮಸೂದೆಗಳನ್ನು ನಾವು ಪಾಸು ಮಾಡುವೆವು ಎಂದು ಪ್ರಧಾನಿ ಹೇಳಿದರು.
ಆದರೆ ಪ್ರಧಾನಿಯವರ ಈ ಮಾತುಗಳಿಂದ ಸಂತುಷ್ಟಗೊಳ್ಳದ ವಿರೋಧ ಪಕ್ಷ, ರಫೇಲ್ ಜೆಟ್ ಡೀಲ್ ಕುರಿತಾಗಿ ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಆಗ್ರಹಿಸುವುದಾಗಿ ಹೇಳಿದೆ.
ಉನ್ನತ ಕೇಂದ್ರ ತನಿಖಾ ದಳಗಳ ದುರುಪಯೋಗ, ಆರ್ಬಿಐ ಸ್ವಾಯತ್ತೆಯೇ ಮೊದಲಾದ ಇನ್ನೂ ಅನೇಕ ವಿಷಯಗಳನ್ನು ವಿರೋಧ ಪಕ್ಷಗಳು ಸಭೆಯಲ್ಲಿ ಎತ್ತಿದವು. ಇವೆಲ್ಲವನ್ನೂ ತಾವು ಮಂಗಳವಾರದಿಂದ ಆರಂಭಗೊಳ್ಳುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಎತ್ತುವುದಾಗಿ ಹೇಳಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !