ಮೂಲ ಸೌಕರ್ಯಕ್ಕೆ ವೇಗ; ಗತಿಶಕ್ತಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ


Team Udayavani, Oct 14, 2021, 6:10 AM IST

ಮೂಲ ಸೌಕರ್ಯಕ್ಕೆ ವೇಗ; ಗತಿಶಕ್ತಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಲ್ಲಿ: ದೇಶದ ಮೂಲಸೌಕರ್ಯ ಯೋಜನೆಗಳ ಅನುಷ್ಠಾನಕ್ಕೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗತಿಶಕ್ತಿ ಯೋಜನೆಗೆ ಬುಧವಾರ ಚಾಲನೆ ನೀಡಿದ್ದಾರೆ.

ಯೋಜನೆಯ ಒಟ್ಟು ಮೊತ್ತ 100 ಲಕ್ಷ ಕೋಟಿ ರೂ. ಇದೊಂದು ರಾಷ್ಟ್ರೀಯ ಮಾಸ್ಟರ್‌ ಪ್ಲ್ಯಾನ್ ಆಗಿದ್ದು, ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನುಕೈಗೊಳ್ಳಲಾಗುತ್ತದೆ. ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ದೇಶದ ಜನರು ಪಾವತಿ ಮಾಡುವ ತೆರಿಗೆಗೆ ಇದುವರೆಗೆ ಸೂಕ್ತ ನ್ಯಾಯ ಸಿಕ್ಕಿರಲಿಲ್ಲ. ಹಿಂದಿನ ಅವಧಿಗಳಲ್ಲಿ ಸೂಕ್ತ ರೀತಿಯಲ್ಲಿ ಕಾಮಗಾರಿಗಳ ಅನುಷ್ಠಾನಕ್ಕೆ ಉದಾ ಸೀನತೆಯ ಭಾವ ತಳೆಯಲಾಗುತ್ತಿತ್ತು. ಈ ಮೂಲಕ ತೆರಿಗೆದಾರರಿಗೆ ಅವಮಾನವಾಗುವ ಸ್ಥಿತಿ ಇತ್ತು ಎಂದು ಪ್ರತಿಪಾದಿಸಿದ್ದಾರೆ.

ದೇಶದ ಮೂಲ ಸೌಕರ್ಯ ಯೋಜನೆಗಳನ್ನು ಜಾರಿ ಮಾಡುವ ನಿಟ್ಟಿನಲ್ಲಿ 16 ಇಲಾಖೆಗಳನ್ನು ಒಂದೇ ವೇದಿಕೆಗೆ ತರಲಾಗಿದೆ. ಈ ಮೂಲಕ ಅವುಗಳ ವೆಚ್ಚ ತಗ್ಗಿಸುವುದು, ಕಾರ್ಗೊ ನಿರ್ವಹಣ ವೆಚ್ಚದಲ್ಲೂ ಕಡಿಮೆಗೊಳಿಸುವುದು ಆದ್ಯತೆಯಾಗಲಿದೆ ಎಂದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೈಗೊಳ್ಳಲಿರುವ ಮೂಲ ಸೌಕರ್ಯ ಯೋಜನೆಗಳನ್ನು ಒಂದೇ ವೇದಿಕೆ ಯಡಿ ತರಲಾಗಿದೆ. ಜತೆಗೆ ಸೂಕ್ತ ರೀತಿಯ ವಿನ್ಯಾಸ ವನ್ನೂ ಕೈಗೊಳ್ಳುವ ಬಗ್ಗೆ ಪರಾಮರ್ಶೆ ನಡೆಸಲಾಗುತ್ತದೆ ಎಂದರು ಪ್ರಧಾನಿ ನರೇಂದ್ರ ಮೋದಿ.

ಶೇ.13ರಷ್ಟು ವೆಚ್ಚ: ದೇಶದ ಜಿಡಿಪಿ ಪ್ರಮಾಣ ಶೇ.13ರಷ್ಟು ಮೊತ್ತ ವಿವಿಧ ಯೋಜನೆಗಳಿಗೆ ನಿರ್ವಹಣ ವೆಚ್ಚವಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್‌ ಪ್ಲ್ರಾನ್‌ ಮೂಲಕ ಇಂಥ ವೆಚ್ಚ ತಗ್ಗಿಸಲು ಪ್ರಯತ್ನಿಸಲಾಗುತ್ತದೆ ಎಂದು ಹೇಳಿದ್ದಾರೆ.

ಗುಣಮಟ್ಟ ಪ್ರಧಾನ: ದೇಶಕ್ಕೆ ಅತ್ಯುತ್ತಮ ಗುಣಮಟ್ಟದ ಮೂಲಸಕೌರ್ಯಗಳು ಬೇಕು. ಅದು ಇಲ್ಲದೆ, ಅಭಿವೃದ್ಧಿ ಸಾಧಿಸಲು ಸಾಧ್ಯವೇ ಇಲ್ಲ. ಹೀಗಾಗಿ ಸಮಗ್ರ ರೀತಿಯಲ್ಲಿ ಅಭಿವೃದ್ಧಿಯ ಕಲ್ಪನೆಗಳನ್ನು ಹೊಂದ ಬೇಕಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ. ಇದರಿಂದಾಗಿ ಕ್ಷಿಪ್ರಗತಿಯಲ್ಲಿ ಯೋಜನೆಗಳು ಅನುಷ್ಠಾನಗೊಂಡು, ದೇಶದಲ್ಲಿ ಮತ್ತಷ್ಟು ಬಂಡವಾಳ ಹೂಡಿಕೆಗೆ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಎಂ.ಎಸ್‌. ಧೋನಿ ಕ್ರಿಕೆಟ್‌ ಅಕಾಡೆಮಿ

70 ವರ್ಷಗಳಲ್ಲಿ ತಮ್ಮ ನೇತೃತ್ವದ ಸರಕಾರದ ಅವಧಿಯಲ್ಲಿ ವೇಗವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ. ದೇಶದಲ್ಲಿ ಅಂತಾರಾಜ್ಯ ಅನಿಲ ಪೈಪ್‌ಲೈನ್‌ ಅನ್ನು 1987ರಲ್ಲಿ ಅನುಷ್ಠಾನಗೊಳಿಸಲಾಯಿತು. 2014ರಿಂದ 15 ಸಾವಿರ ಕಿಮೀ ದೂರದಷ್ಟು ನೈಸರ್ಗಿಕ ಅನಿಲ ಪೈಪ್‌ ಲೈನ್‌ ಹಾಕಲಾಗಿದೆ. ಸದ್ಯ 16 ಸಾವಿರ ಕಿಮೀಗಿಂತ ಹೆಚ್ಚು ಪೈಪ್‌ಲೈನ್‌ ಅಳವಡಿಸಲಾಗುತ್ತಿದೆ. 2014ರಿಂದ 2019ರ ಅವಧಿಯಲ್ಲಿ 1,300 ಕಿಮೀ ರೈಲ್ವೇ ಹಳಿಯನ್ನು ದ್ವಿಪಥಕ್ಕೆ ಪರಿವರ್ತಿಸಲಾಗಿದೆ. 7 ವರ್ಷಗಳಲ್ಲಿ 9 ಸಾವಿರ ಕಿಮೀ ರೈಲು ಮಾರ್ಗ ದ್ವಿಪಥ ಗೊಳಿಸಲಾಗಿದೆ. ಮಾತ್ರವಲ್ಲದೆ, ಹಲವು ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳನ್ನೂ ಪ್ರಧಾನಿ ಇದೇ ಸಂದರ್ಭದಲ್ಲಿ ವಿವರಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.