![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ
ಕೇವಲ ದ್ರವ ಆಹಾರ ಮಾತ್ರ...ವ್ಯಾಪಕ ಕಟ್ಟೆಚ್ಚರ
Team Udayavani, May 30, 2024, 9:57 PM IST
![1-aaa](https://www.udayavani.com/wp-content/uploads/2024/05/1-aaa-3-620x369.jpg)
ಕನ್ಯಾಕುಮಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಐತಿಹಾಸಿಕ ಸ್ವಾಮಿ ವಿವೇಕಾನಂದ ಸ್ಮಾರಕದಲ್ಲಿ 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ್ದಾರೆ.
ಭಾರತದ ದಕ್ಷಿಣದ ತುದಿಯಲ್ಲಿ ಪ್ರಧಾನಿ ಮೋದಿಯವರ ಧ್ಯಾನವು ಗುರುವಾರ ಸಂಜೆ 6.45 ರ ಸುಮಾರಿಗೆ ಪ್ರಾರಂಭವಾಯಿತು. ಧ್ಯಾನದ ಅವಧಿಯಲ್ಲಿ, ಪ್ರಧಾನಮಂತ್ರಿ ಅವರು ಕೇವಲ ದ್ರವ ಆಹಾರ ಮಾತ್ರ ಸೇವಿಸುತ್ತಾರೆ. ಎಳನೀರು, ದ್ರಾಕ್ಷಿ ರಸ ಮತ್ತು ಇತರ ದ್ರವಗಳನ್ನು ಸೇವಿಸುತ್ತಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಧಾನಮಂತ್ರಿಯವರುಧ್ಯಾನದ ಅವಧಿಯಲ್ಲಿ ಮೌನವಾಗಿದ್ದು ಧ್ಯಾನ ಮಂದಿರದಿಂದ ಹೊರಗೆ ಬರುವುದಿಲ್ಲ. ಲೋಕಸಭಾ ಚುನಾವಣೆಯ ಎಡೆಬಿಡದ ಪ್ರಚಾರ ಅಂತ್ಯವಾದ ಬಳಿಕ ಪ್ರಧಾನಿ ಮೋದಿ ಅವರು ಆಧ್ಯಾತ್ಮಿಕ ಧ್ಯಾನ ನಡೆಸುತ್ತಿದ್ದಾರೆ.
131 ವರ್ಷಗಳ ಹಿಂದೆ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿ ಅವರು 45 ಗಂಟೆಗಳ ಕಾಲ ಧ್ಯಾನ ಮಾಡುತ್ತಿರುವುದು ವಿಶೇಷವಾಗಿದೆ. ಪ್ರಧಾನಿ ಇರುವ ಸ್ಥಳದ ಸುತ್ತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಕಪ್ಪು ಬಾವುಟ
ನರೇಂದ್ರ ಮೋದಿಯವರ ಕನ್ಯಾಕುಮಾರಿ ಭೇಟಿಯನ್ನು ವಿರೋಧಿಸಿ ತಿರುನಲ್ವೇಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಂಕರಪಾಂಡಿಯನ್ ಅವರು ಗುರುವಾರ ತಿರುನಲ್ವೇಲಿಯ ಕೊಕ್ಕಿರಕುಲಂನಲ್ಲಿರುವ ಪಕ್ಷದ ಕಚೇರಿಯ ಮೇಲೆ ಕಾರ್ಯಕರ್ತರೊಂದಿಗೆ ಕಪ್ಪು ಬಾವುಟಗಳನ್ನು ಹಾರಿಸಿ ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.