ದೇಶದಲ್ಲಿ ಕೋವಿಡ್ ಉಲ್ಬಣ : ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
Team Udayavani, Apr 18, 2021, 5:45 PM IST
ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್-19 ಸೋಂಕು ಉಲ್ಬಣಿಸುತ್ತಿರುವ ಬೆನ್ನಲ್ಲೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.
ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಸಿಂಗ್, ಕೋವಿಡ್-19 ವಿರುದ್ದದ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಪ್ರಯತ್ನಿಸಬೇಕು, ಎಷ್ಟು ಸಂಖ್ಯೆಯ ಲಸಿಕೆ ಹಾಕಲಾಗಿದೆ ಎಂಬುದನ್ನು ನೋಡಬಾರದು. ಲಸಿಕೆ ಪಡೆದ ಶೇಕಡಾವಾರು ಜನಸಂಖ್ಯೆ ಮೇಲೆ ಗಮನ ಕೇಂದ್ರೀಕರಿಸಬೇಕು ಎಂದು ಹೇಳಿದ್ದಾರೆ.
ಭಾರತ ಪ್ರಸ್ತುತ ತನ್ನ ಜನಸಂಖ್ಯೆಯ ಒಂದು ಸಣ್ಣ ಭಾಗಕ್ಕೆ ಮಾತ್ರ ಲಸಿಕೆ ನೀಡಿದೆ. ಸರಿಯಾದ ಯೋಜನೆಯೊಂದಿಗೆ ನಾವು ಹೆಚ್ಚು ಉತ್ತಮವಾಗಿ ಮತ್ತು ತ್ವರಿತವಾಗಿ ಲಸಿಕೆ ನೀಡಬೇಕಾಗಿದೆ. ಸಾಂಕ್ರಾಮಿಕದ ವಿರುದ್ಧ ಹೋರಾಡಲು ನಾವು ಅನೇಕ ಕೆಲಸಗಳನ್ನು ಮಾಡಬೇಕು. ಆದರೆ, ಈ ಪ್ರಯತ್ನದ ಒಂದು ದೊಡ್ಡ ಭಾಗವಾಗಿ ವ್ಯಾಕ್ಸಿನೇಷನ್ ಹೆಚ್ಚಳ ಮಾಡಬೇಕು.
ಲಸಿಕೆ ಉತ್ಪಾದಕರಿಗೆ ತ್ವರಿತವಾಗಿ ಹಣ ಹಾಗೂ ಇತರೆ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೇಂದ್ರ ಸರ್ಕಾರವು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಬೇಕು. ದೇಶದ ವಿವಿಧ ರಾಜ್ಯಗಳಿಗೆ ಬೇಡಿಕೆಗೆ ಅನುಗುಣವಾಗಿ ಯಾವ ಪ್ರಮಾಣದಲ್ಲಿ ಲಸಿಕೆ ಪೂರೈಸಲಾಗುತ್ತದೆ ಎಂಬುದನ್ನು ಪಾರದರ್ಶಕವಾಗಿ ಕೇಂದ್ರ ಸರ್ಕಾರ ತಿಳಿಸಬೇಕೆಂದು ಮನಮಹೋನ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು