ರೈತರ ಬಗ್ಗೆ ಮೊಸಳೆ ಕಣ್ಣೀರು
Team Udayavani, Jul 16, 2018, 10:11 AM IST
ಮಿರ್ಜಾಪುರ: ರೈತರ ಕಲ್ಯಾಣದ ಬಗ್ಗೆ ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಬರೀ ಮೊಸಳೆ ಕಣ್ಣೀರು ಸುರಿಸುತ್ತಲೇ ಬಂದಿವೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ. ಉತ್ತರ ಪ್ರದೇಶಕ್ಕೆ 2 ದಿನಗಳ ಪ್ರವಾಸ ಕೈಗೊಂಡಿರುವ ಮೋದಿ, ಭಾನುವಾರ ಹಲವು ಮಹತ್ವದ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಮಿರ್ಜಾಪುರದಲ್ಲಿ ಬನ್ಸಾಗರ್ ನಾಲೆ ಯೋಜನೆ ಉದ್ಘಾಟಿಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ರೈತರ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ನಡೆಸುತ್ತಿದೆ. ಕನಿಷ್ಠ ಬೆಂಬಲ ಬೆಲೆ ಏರಿಸುವುದಕ್ಕೂ ಅವರ ಬಳಿ ಸಮಯವಿರಲಿಲ್ಲ. ನಾವು ಅದನ್ನು ಮಾಡಿದ್ದೇವೆ. ನಮ್ಮ ಸರಕಾರಗಳ ಪ್ರಯತ್ನದಿಂದಾಗಿ ರೈತರ ಆದಾಯ ದುಪ್ಪಟ್ಟಾಗುವ ದಿನ ದೂರವಿಲ್ಲ. ಕಾಂಗ್ರೆಸ್ ತನ್ನ ಅವಧಿಯಲ್ಲಿ ಹಲವು ನೀರಾವರಿ ಯೋಜನೆಗಳನ್ನು ಯಾಕೆ ಪೂರ್ಣಗೊಳಿಸಿಲ್ಲ ಎಂದು ಜನರು ಪ್ರಶ್ನಿಸಬೇಕು ಎಂದಿದ್ದಾರೆ. ಮಿರ್ಜಾಪುರ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ, 108 ಜನೌಷಧ ಕೇಂದ್ರಗಳು ಹಾಗೂ ಗಂಗಾ ನದಿಗೆ ಮಿರ್ಜಾಪುರ-ವಾರಾಣಸಿ ಸಂಪರ್ಕಿಸುವ ಸೇತುವೆ ಉದ್ಘಾಟನೆಯನ್ನೂ ಅವರು ನೆರವೇರಿಸಿದ್ದಾರೆ.
ಮೋದಿ ಮನಸ್ಥಿತಿ ರೋಗಗ್ರಸ್ಥ: ಕಾಂಗ್ರೆಸ್ ಮುಸ್ಲಿಂ ಪುರುಷರ ಪಕ್ಷ ಮಾತ್ರ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿರುವುದು ಅದರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು